ಬ್ರೇಕಿಂಗ್ ನ್ಯೂಸ್
18-08-22 05:11 pm HK News Desk ಕ್ರೈಂ
ಹಾಸನ, ಆಗಸ್ಟ್ 18: ನಿಧಿಯಾಸೆ ತೋರಿಸಿ ತಾನೇ ಹೂತಿಟ್ಟ ಚಿನ್ನದ ಲೇಪನದ ವಿಗ್ರಹವನ್ನು ತೆಗೆದು ಕೊಟ್ಟು ನಕಲಿ ಸ್ವಾಮೀಜಿಯೊಬ್ಬ ಬರೋಬ್ಬರಿ ಐದು ಲಕ್ಷ ರೂಪಾಯಿ ಪೀಕಿಸಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ತೋಟದಲ್ಲಿ ನಿಧಿ ಇದೆ ಎಂದು ಆಸೆ ತೋರಿಸಿ ಹಣ ಪೀಕಿಸಿದ್ದಲ್ಲದೆ, ಅವರದೇ ಜಮೀನಿನಲ್ಲಿ ಚಿನ್ನದ ವಿಗ್ರಹ ಎಂದು ಹೇಳಿ ಅಗೆದು ತೆಗೆದುಕೊಟ್ಟಿದ್ದಾನೆ. ವಂಚನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ವಂಚಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಅವರ ಪುತ್ರ ಪುನೀತ್ ಎಂಬವರು ಮೋಸ ಹೋದವರು. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ, ಅದನ್ನು ರಾತ್ರಿ ವೇಳೆ ನಿಧಿ ಹುಡುಕಿ ಕೊಡುವುದಾಗಿ ಹೇಳಿ ವಿಗ್ರಹ ತೋರಿಸಿ ನಂಬಿಸಿದ್ದಾನೆ. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ ತಾನೇ ಭೂಮಿಯೊಳಗೆ ಹೂತಿಟ್ಟು ಮತ್ತೆ ಅದನ್ನೇ ತೆಗೆದು ಕೊಡುವ ವಿಡಿಯೋ ಲಭ್ಯವಾಗಿದೆ. ವಿಗ್ರಹ ತೆಗೆಯುವ ವೇಳೆ ರಕ್ತ ಬೇಕೆಂದು ಮಹಿಳೆಯೊಬ್ಬರ ಕೈ ಕೊಯ್ದು ರಕ್ತ ಸುರಿಸಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳ ಸ್ವಾಮೀಜಿ ಮಂಜುನಾಥ್ ಮೂಲತಃ ದೊಡ್ಡಹಳ್ಳಿ ಗ್ರಾಮದವನಾಗಿದ್ದು, ಅಸಲಿ ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಪರಾರಿಯಾಗಿದ್ದಾನೆ.
Hassan Fake swamiji cheats a couple of 5 lakhs in the name of searching treasure
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm