ಬ್ರೇಕಿಂಗ್ ನ್ಯೂಸ್
18-08-22 05:11 pm HK News Desk ಕ್ರೈಂ
ಹಾಸನ, ಆಗಸ್ಟ್ 18: ನಿಧಿಯಾಸೆ ತೋರಿಸಿ ತಾನೇ ಹೂತಿಟ್ಟ ಚಿನ್ನದ ಲೇಪನದ ವಿಗ್ರಹವನ್ನು ತೆಗೆದು ಕೊಟ್ಟು ನಕಲಿ ಸ್ವಾಮೀಜಿಯೊಬ್ಬ ಬರೋಬ್ಬರಿ ಐದು ಲಕ್ಷ ರೂಪಾಯಿ ಪೀಕಿಸಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ತೋಟದಲ್ಲಿ ನಿಧಿ ಇದೆ ಎಂದು ಆಸೆ ತೋರಿಸಿ ಹಣ ಪೀಕಿಸಿದ್ದಲ್ಲದೆ, ಅವರದೇ ಜಮೀನಿನಲ್ಲಿ ಚಿನ್ನದ ವಿಗ್ರಹ ಎಂದು ಹೇಳಿ ಅಗೆದು ತೆಗೆದುಕೊಟ್ಟಿದ್ದಾನೆ. ವಂಚನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ವಂಚಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಅವರ ಪುತ್ರ ಪುನೀತ್ ಎಂಬವರು ಮೋಸ ಹೋದವರು. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ, ಅದನ್ನು ರಾತ್ರಿ ವೇಳೆ ನಿಧಿ ಹುಡುಕಿ ಕೊಡುವುದಾಗಿ ಹೇಳಿ ವಿಗ್ರಹ ತೋರಿಸಿ ನಂಬಿಸಿದ್ದಾನೆ. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ ತಾನೇ ಭೂಮಿಯೊಳಗೆ ಹೂತಿಟ್ಟು ಮತ್ತೆ ಅದನ್ನೇ ತೆಗೆದು ಕೊಡುವ ವಿಡಿಯೋ ಲಭ್ಯವಾಗಿದೆ. ವಿಗ್ರಹ ತೆಗೆಯುವ ವೇಳೆ ರಕ್ತ ಬೇಕೆಂದು ಮಹಿಳೆಯೊಬ್ಬರ ಕೈ ಕೊಯ್ದು ರಕ್ತ ಸುರಿಸಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳ ಸ್ವಾಮೀಜಿ ಮಂಜುನಾಥ್ ಮೂಲತಃ ದೊಡ್ಡಹಳ್ಳಿ ಗ್ರಾಮದವನಾಗಿದ್ದು, ಅಸಲಿ ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಪರಾರಿಯಾಗಿದ್ದಾನೆ.
Hassan Fake swamiji cheats a couple of 5 lakhs in the name of searching treasure
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm