ಬ್ರೇಕಿಂಗ್ ನ್ಯೂಸ್
18-08-22 05:35 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 18: ಕಾನೂನು ವಿದ್ಯಾರ್ಥಿನಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಮಂಗಳೂರು ದಕ್ಷಿಣ ಉಪ ವಿಭಾಗ ಎಸಿಪಿ ದಿನಕರ ಶೆಟ್ಟಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
2021ರ ಸೆಪ್ಟಂಬರ್ 25ರಂದು ಕರಂಗಲ್ಪಾಡಿಯ ಕಚೇರಿಯಲ್ಲಿದ್ದಾಗ ವಕೀಲ ಕೆಎಸ್ಎನ್ ರಾಜೇಶ್ ತನ್ನ ಮೇಲೆ ಅತ್ಯಾಚಾರ ನಡೆಸುವ ಉದ್ದೇಶದಿಂದ ಲೈಂಗಿಕ ಕಿರುಕುಳ ನೀಡಿದ್ದಾರೆಂದು ವಿದ್ಯಾರ್ಥಿನಿ ಅಕ್ಟೋಬರ್ 18ರಂದು ಉರ್ವಾ ಠಾಣೆಗೆ ದೂರು ನೀಡಿದ್ದರು. ಬಳಿಕ ಪ್ರಕರಣವನ್ನು ಮಹಿಳಾ ಠಾಣೆಗೆ ವರ್ಗಾಯಿಸಿ ಐಪಿಸಿ ಸೆಕ್ಷನ್ 376, 376(2) ಎಫ್, 376(2)ಕೆ, 376(ಸಿ)ಎ, 511, 354(ಎ), 354(ಬಿ), 354(ಸಿ), 354(ಡಿ), 506, 384, 388, 389, 204, 203, 212, 120 ಬಿ, 179, 202 ಜೊತೆಗೆ 149 ಅಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ವಿಚಾರದಲ್ಲಿ ಮಂಗಳೂರಿನ ಕೆಲವು ವಕೀಲರೇ ಮುತುವರ್ಜಿ ವಹಿಸಿದ್ದರಿಂದ ಕೇಸು ಬಿಗಿಯಾಗಿತ್ತು.

ಅಲ್ಲದೆ, ಅತ್ಯಾಚಾರ ಯತ್ನ ಪ್ರಕರಣ ಮಾಧ್ಯಮದಲ್ಲಿಯೂ ಭಾರೀ ಸುದ್ದಿಯಾಗಿದ್ದರಿಂದ ಆರೋಪಿ ವಕೀಲ ತಲೆಮರೆಸಿಕೊಂಡಿದ್ದರು. ಎರಡು ತಿಂಗಳ ಬಳಿಕ ಮಂಗಳೂರಿನ 3ನೇ ಜೆಎಂಎಫ್ ಕೋರ್ಟಿಗೆ ವಕೀಲ ಶರಣಾಗತಿಯಾಗಿದ್ದು, ಆನಂತರ ಪೊಲೀಸರು ಕಸ್ಟಡಿಗೆ ಪಡೆದು ತನಿಖೆ ನಡೆಸಿದ್ದರು. ಆ ಸಂದರ್ಭದಲ್ಲಿ ತನಿಖೆಯ ಹೊಣೆಯನ್ನು ನಗರ ದಕ್ಷಿಣ ಉಪವಿಭಾಗದ ಎಸಿಪಿಯಾಗಿದ್ದ ರಂಜಿತ್ ಕುಮಾರ್ ಬಂಡಾರು ಅವರಿಗೆ ವಹಿಸಲಾಗಿತ್ತು.
ಪ್ರಕರಣ ಕೈಗೆತ್ತಿಕೊಂಡ ಒಂದೇ ತಿಂಗಳಲ್ಲಿ ರಂಜಿತ್ ಕುಮಾರ್ ವರ್ಗಾವಣೆಯಾಗಿದ್ದು ತೆರವಾದ ಜಾಗಕ್ಕೆ ದಿನಕರ ಶೆಟ್ಟಿ ಬಂದಿದ್ದರು. ದಿನಕರ ಶೆಟ್ಟಿ ತನಿಖೆಯನ್ನು ಪೂರ್ತಿಗೊಳಿಸಿ ಇದೀಗ 3ನೇ ಜೆಎಂಎಫ್ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 1ನೇ ಆರೋಪಿ ಕೆಎಸ್ಎನ್ ರಾಜೇಶ್ ಮತ್ತು ಆರೋಪಿ ಪರಾರಿಯಾಗಲು ಸಹಕರಿಸಿ 2ನೇ ಆರೋಪಿ ಅನಂತ ಭಟ್ ಮತ್ತು 3ನೇ ಆರೋಪಿ ಅಚ್ಚುತ್ತ ಭಟ್ ಶಿಕ್ಷಾರ್ಹ ಅಪರಾಧ ಎಸಗಿದ್ದಾರೆಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
Mangalore Charge sheet filed against Lawyer KSN Rajesh over sexual harassment case. Two law student interns have filed complaints in the women's police station here, against special public prosecutor, K S N Rajesh of the Lokayukta division here, accusing him of sexual harassment and threat. A case has been registered against the advocate concerned.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm