ಬ್ರೇಕಿಂಗ್ ನ್ಯೂಸ್
19-08-22 11:40 am Mangalore Correspondent ಕ್ರೈಂ
ಸುಳ್ಯ , ಆಗಸ್ಟ್ 19 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಪ್ರಕರಣದ ಆರೋಪಿಗಳಾದ ನೌಫಾಲ್, ಝೈನುಲ್ ಅಬಿದ್, ಮೊಹಮ್ಮದ್ ಸೈಯದ್, ಅಬ್ದುಲ್ ಬಶೀರ್ ಮತ್ತು ರಿಯಾಜ್ ಅವರನ್ನು ಆಗಸ್ಟ್ 23 ರ ವರೆಗೆ ಸುಳ್ಯದ ನ್ಯಾಯಾಲಯ ಎನ್ಐಎ ವಶಕ್ಕೆ ಒಪ್ಪಿಸಿದೆ. ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು.
ಪ್ರಕರಣದಲ್ಲಿ ಬಿಜೆಪಿ ಸರಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದರಿಂದ ಸ್ಥಳೀಯ ಪೊಲೀಸರು ತೀವ್ರ ಒತ್ತಡಕ್ಕೊಳಗಾಗಿದ್ದರು. ಪ್ರಮುಖ ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದರಿಂದ ಪ್ರಕರಣ ಕಗ್ಗಂಟಾಗಿತ್ತು. ಮೊದಲು ಸಂಚು ನಡೆಸಿದ್ದ ಆರು ಮಂದಿಯನ್ನು ಬಂಧಿಸಿದ್ದರೂ, ನೇರ ಶಾಮೀಲಾದವರು ಸಿಕ್ಕಿರಲಿಲ್ಲ. 15 ದಿನಗಳ ನಿರಂತರ ತನಿಖೆಯ ಬಳಿಕ ಕೇರಳದಲ್ಲಿ ಅವಿತುಕೊಂಡಿದ್ದವರು ಸಿಕ್ಕಿಬಿದ್ದಿದ್ದರು. ಕೊನೆಗೆ ಬಂಧಿತರಾಗಿದ್ದ ಶಿಹಾಬುದ್ದೀನ್, ರಿಯಾಜ್ ಮತ್ತು ಬಶೀರ್ ಕೃತ್ಯದಲ್ಲಿ ನೇರ ಭಾಗಿಯಾಗಿದ್ದಲ್ಲದೆ, ಕೊಲೆಗೆ ಪೂರ್ತಿ ಸಂಚನ್ನು ಇವರೇ ಹೆಣೆದಿದ್ದರು ಎನ್ನುವುದು ತನಿಖೆಯಲ್ಲಿ ಕಂಡುಬಂದಿತ್ತು.
ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದರಿಂದ ತನಿಖೆಯ ಹೊಣೆಯನ್ನು ರಾಜ್ಯ ಸರಕಾರ ಎನ್ಐಎಗೆ ವಹಿಸಿತ್ತು. ಪ್ರಕರಣದ ಬಗ್ಗೆ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಎನ್ಐಎ ತನಿಖೆಗೆ ಒತ್ತಾಯ ಮಾಡಿದ್ದರಿಂದ ಪ್ರಕರಣಕ್ಕೆ ಚುರುಕು ಸಿಕ್ಕಿತ್ತು. ಎನ್ಐಎ ಅಧಿಕಾರಿಗಳು ಆರಂಭದಲ್ಲೇ ಪುತ್ತೂರು, ಸುಳ್ಯಕ್ಕೆ ಆಗಮಿಸಿ ತನಿಖೆಗೆ ಕೈಜೋಡಿಸಿದ್ದರು. ಇದೀಗ ಪ್ರಕರಣದ ಒಟ್ಟು ಫೈಲನ್ನು ಸ್ಥಳೀಯ ಪೊಲೀಸರಿಂದ ಪಡೆದುಕೊಂಡಿರುವ ಎನ್ಐಎ ಅಧಿಕಾರಿಗಳು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ಮತ್ತೆ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬೇರೆ ಪ್ರಮುಖರ ಕೈವಾಡ ಕಂಡುಬಂದಲ್ಲಿ ಇನ್ನಷ್ಟು ಮಂದಿಯ ಬಂಧನ ಆಗುವ ಸಾಧ್ಯತೆಯಿದೆ.
Praveen Bellare Murder case, Five persons have been taken to custody by NIA team in Sullia. On July 26, bike-borne miscreants attacked Praveen in the Bellare town of Dakshina Kannada district in front of his chicken shop and hacked him to death.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm