ಬ್ರೇಕಿಂಗ್ ನ್ಯೂಸ್
 
            
                        20-08-22 03:44 pm Bangalore Correspondent ಕ್ರೈಂ
 
            ಬೆಂಗಳೂರು, ಆಗಸ್ಟ್ 20 : ವೃದ್ಧ ಮಹಿಳೆಯನ್ನು ಕೊಂದು ಚಿನ್ನಾಭರಣ ದರೋಡೆಗೈದು ಪರಾರಿಯಾಗಿದ್ದ ಹಂತಕರನ್ನು ನೇಪಾಳ ಗಡಿಯಲ್ಲಿ ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಎಚ್ಎಸ್ಆರ್ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 13ರಂದು ಜಯಶ್ರೀ ಎಂಬ ವೃದ್ಧೆಯನ್ನ ಕಟ್ಟಿ ಹಾಕಿ, ಹೊಡೆದು ದರೋಡೆಗೈದ ಘಟನೆ ನಡೆದಿತ್ತು. ವೃದ್ಧೆ ಬಳಿಕ ಸ್ಥಳದಲ್ಲೇ ಸಾವು ಕಂಡಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ನೇಪಾಳಿಗರ ಗ್ಯಾಂಗ್ ಕೃತ್ಯ ಅನ್ನೋ ಸುಳಿವು ಸಿಕ್ಕಿತ್ತು. ಆರೋಪಿಗಳು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದಾರೆದು ತಿಳಿಯುತ್ತಿದ್ದಂತೆ ಅಲರ್ಟ್ ಆಗಿದ್ದ ಪೊಲೀಸರು ಟವರ್ ಲೊಕೇಶನ್ ಆಧರಿಸಿ ಬೆನ್ನತ್ತಿದ್ದರು. ಎರಡು ಪೊಲೀಸ್ ತಂಡಗಳು ಲೈವ್ ಲೊಕೇಷನ್, ಟೋಲ್ ಸಿಸಿಟಿವಿಗಳ ಮೂಲಕ ಆರೋಪಿಗಳನ್ನ ಬೆನ್ನು ಹತ್ತಿದ್ದವು.
ಉತ್ತರ ಪ್ರದೇಶದ ಲಕ್ನೋಗೆ ತೆರಳಿ, ಆರೋಪಿಗಳು ಅಲ್ಲಿಂದ ನೇಪಾಳಕ್ಕೆ ಪರಾರಿಯಾಗಲು ಯತ್ನಿಸಿದ್ದರು. ಆದ್ರೆ ಅಲ್ಲಿ ತಮ್ಮ ಸಹಚರರು ಬಾರದ ಹಿನ್ನೆಲೆ ಕಾನ್ಪುರದಲ್ಲಿ ಅವಿತುಕೊಂಡಿದ್ದರು. ಆರೋಪಿಗಳು ಕಾನ್ಪುರದಲ್ಲಿ ಉಳಿದುಕೊಂಡಿರುವುದು ಖಚಿತವಾಗುತ್ತಲೇ ಪೊಲೀಸರು ರೌಂಡಪ್ ಮಾಡಿ ಸೆರೆ ಹಿಡಿದಿದ್ದಾರೆ. ಆರೋಪಿಗಳು ಚಿನ್ನಾಭರಣ ಸಹಿತ ಪರಾರಿಯಾಗುತ್ತಿದ್ದಾಗಲೇ ಬಂಧಿಸಿದ್ದು ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ.

ಪರಾರಿಯಾಗುತ್ತಿದ್ದ ನೇಪಾಳಿ ಗ್ಯಾಂಗ್ ಬಂಧನಕ್ಕಾಗಿ ಆರು ಮಂದಿ ಇನ್ಸ್ಪೆಕ್ಟರ್ ಗಳನ್ನು ಬಳಸ್ಕೊಂಡು ವಿಶೇಷ ತಂಡವನ್ನು ರಚಿಸಲಾಗಿತ್ತು. ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬಾ, ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಹ್ಮಣೇಶ್ವರ್ ರಾವ್ ಮಾರ್ಗದರ್ಶನದಲ್ಲಿ ಕೊಲೆ ಪ್ರಕರಣವನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಭೇದಿಸಿದ್ದಾರೆ.
ಈ ಬಗ್ಗೆ ಎಸಿಪಿ ಸುಬ್ರಹ್ಮಣ್ಯೇಶ್ವರ ರಾವ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು ಹೆಚ್ ಎಸ್ ಆರ್ ಲೇ ಔಟ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 13 ರಂದು ಮಹಿಳೆಯ ಮರ್ಡರ್ ಆಗಿತ್ತು. ಪೊಲೀಸರು ಕರಾರುವಾಕ್ ಕಾರ್ಯಾಚರಣೆ ನಡೆಸಿ ಆರು ಜನ ನೇಪಾಳ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ. ಇತ್ತಿಚೀನ ದಿನಗಳಲ್ಲಿ ವೃದ್ಧರನ್ನು ಟಾರ್ಗೆಟ್ ಮಾಡಿ ದರೋಡೆ ನಡೆಸುವ ಕೃತ್ಯ ಹೆಚ್ಚುತ್ತಿದೆ. ಆರೋಪಿಗಳು ನೇಪಾಳದ ಪ್ರಜೆಗಳಾಗಿದ್ದು ನಾಲ್ಕು ಜನ ಬೆಂಗಳೂರಿನಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದರು. ಇನ್ನೂ ಇಬ್ಬರನ್ನು ನೇಪಾಳದಿಂದ ಕರೆಸಿಕೊಂಡು ಕೃತ್ಯ ಎಸಗಿದ್ದಾರೆ. ಇನ್ನು ಮುಂದೆ ಬೇರೆ ದೇಶದ ವ್ಯಕ್ತಿಗಳನ್ನು ನೇಮಕ ಮಾಡಿಕೊಳ್ಳುವಾಗ ಹಿನ್ನೆಲೆ ಬಗ್ಗೆ ವೆರಿಫೇಕೆಶನ್ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. 
 
            
            
            Four Nepalis arrested for robbery and murder of old grandmother in Bangalore.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm