ಬ್ರೇಕಿಂಗ್ ನ್ಯೂಸ್
20-08-22 03:44 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20 : ವೃದ್ಧ ಮಹಿಳೆಯನ್ನು ಕೊಂದು ಚಿನ್ನಾಭರಣ ದರೋಡೆಗೈದು ಪರಾರಿಯಾಗಿದ್ದ ಹಂತಕರನ್ನು ನೇಪಾಳ ಗಡಿಯಲ್ಲಿ ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಎಚ್ಎಸ್ಆರ್ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 13ರಂದು ಜಯಶ್ರೀ ಎಂಬ ವೃದ್ಧೆಯನ್ನ ಕಟ್ಟಿ ಹಾಕಿ, ಹೊಡೆದು ದರೋಡೆಗೈದ ಘಟನೆ ನಡೆದಿತ್ತು. ವೃದ್ಧೆ ಬಳಿಕ ಸ್ಥಳದಲ್ಲೇ ಸಾವು ಕಂಡಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ನೇಪಾಳಿಗರ ಗ್ಯಾಂಗ್ ಕೃತ್ಯ ಅನ್ನೋ ಸುಳಿವು ಸಿಕ್ಕಿತ್ತು. ಆರೋಪಿಗಳು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದಾರೆದು ತಿಳಿಯುತ್ತಿದ್ದಂತೆ ಅಲರ್ಟ್ ಆಗಿದ್ದ ಪೊಲೀಸರು ಟವರ್ ಲೊಕೇಶನ್ ಆಧರಿಸಿ ಬೆನ್ನತ್ತಿದ್ದರು. ಎರಡು ಪೊಲೀಸ್ ತಂಡಗಳು ಲೈವ್ ಲೊಕೇಷನ್, ಟೋಲ್ ಸಿಸಿಟಿವಿಗಳ ಮೂಲಕ ಆರೋಪಿಗಳನ್ನ ಬೆನ್ನು ಹತ್ತಿದ್ದವು.
ಉತ್ತರ ಪ್ರದೇಶದ ಲಕ್ನೋಗೆ ತೆರಳಿ, ಆರೋಪಿಗಳು ಅಲ್ಲಿಂದ ನೇಪಾಳಕ್ಕೆ ಪರಾರಿಯಾಗಲು ಯತ್ನಿಸಿದ್ದರು. ಆದ್ರೆ ಅಲ್ಲಿ ತಮ್ಮ ಸಹಚರರು ಬಾರದ ಹಿನ್ನೆಲೆ ಕಾನ್ಪುರದಲ್ಲಿ ಅವಿತುಕೊಂಡಿದ್ದರು. ಆರೋಪಿಗಳು ಕಾನ್ಪುರದಲ್ಲಿ ಉಳಿದುಕೊಂಡಿರುವುದು ಖಚಿತವಾಗುತ್ತಲೇ ಪೊಲೀಸರು ರೌಂಡಪ್ ಮಾಡಿ ಸೆರೆ ಹಿಡಿದಿದ್ದಾರೆ. ಆರೋಪಿಗಳು ಚಿನ್ನಾಭರಣ ಸಹಿತ ಪರಾರಿಯಾಗುತ್ತಿದ್ದಾಗಲೇ ಬಂಧಿಸಿದ್ದು ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ.

ಪರಾರಿಯಾಗುತ್ತಿದ್ದ ನೇಪಾಳಿ ಗ್ಯಾಂಗ್ ಬಂಧನಕ್ಕಾಗಿ ಆರು ಮಂದಿ ಇನ್ಸ್ಪೆಕ್ಟರ್ ಗಳನ್ನು ಬಳಸ್ಕೊಂಡು ವಿಶೇಷ ತಂಡವನ್ನು ರಚಿಸಲಾಗಿತ್ತು. ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬಾ, ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಹ್ಮಣೇಶ್ವರ್ ರಾವ್ ಮಾರ್ಗದರ್ಶನದಲ್ಲಿ ಕೊಲೆ ಪ್ರಕರಣವನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಭೇದಿಸಿದ್ದಾರೆ.
ಈ ಬಗ್ಗೆ ಎಸಿಪಿ ಸುಬ್ರಹ್ಮಣ್ಯೇಶ್ವರ ರಾವ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು ಹೆಚ್ ಎಸ್ ಆರ್ ಲೇ ಔಟ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 13 ರಂದು ಮಹಿಳೆಯ ಮರ್ಡರ್ ಆಗಿತ್ತು. ಪೊಲೀಸರು ಕರಾರುವಾಕ್ ಕಾರ್ಯಾಚರಣೆ ನಡೆಸಿ ಆರು ಜನ ನೇಪಾಳ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ. ಇತ್ತಿಚೀನ ದಿನಗಳಲ್ಲಿ ವೃದ್ಧರನ್ನು ಟಾರ್ಗೆಟ್ ಮಾಡಿ ದರೋಡೆ ನಡೆಸುವ ಕೃತ್ಯ ಹೆಚ್ಚುತ್ತಿದೆ. ಆರೋಪಿಗಳು ನೇಪಾಳದ ಪ್ರಜೆಗಳಾಗಿದ್ದು ನಾಲ್ಕು ಜನ ಬೆಂಗಳೂರಿನಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದರು. ಇನ್ನೂ ಇಬ್ಬರನ್ನು ನೇಪಾಳದಿಂದ ಕರೆಸಿಕೊಂಡು ಕೃತ್ಯ ಎಸಗಿದ್ದಾರೆ. ಇನ್ನು ಮುಂದೆ ಬೇರೆ ದೇಶದ ವ್ಯಕ್ತಿಗಳನ್ನು ನೇಮಕ ಮಾಡಿಕೊಳ್ಳುವಾಗ ಹಿನ್ನೆಲೆ ಬಗ್ಗೆ ವೆರಿಫೇಕೆಶನ್ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
Four Nepalis arrested for robbery and murder of old grandmother in Bangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm