ಬ್ರೇಕಿಂಗ್ ನ್ಯೂಸ್
20-08-22 10:26 pm HK News Desk ಕ್ರೈಂ
ಉಡುಪಿ, ಆಗಸ್ಟ್ 20: ಮಹಿಳೆಯೊಬ್ಬರು ಆನ್ಲೈನ್ ಗಿಫ್ಟ್ ಆಸೆಗೆ ಬಿದ್ದು ಬರೋಬ್ಬರಿ 15 ಲಕ್ಷ ರೂಪಾಯಿ ಕಳಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದ್ದು, ಈ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೂರ್ಣಿಮಾ ಎಂಬ ಮಹಿಳೆ ಮೋಸಕ್ಕೊಳಗಾದವರು. ಅವರಿಗೆ ಕಳೆದ ಮೇ ತಿಂಗಳಲ್ಲಿ ನ್ಯಾಪ್ಟಾಲ್ ಹೆಸರಲ್ಲಿ ಅಂಚೆ ಲಕೋಟೆ ಬಂದಿತ್ತು. ಅದರಲ್ಲಿ ತಾವು 14.8 ಲಕ್ಷ ರೂ. ಕೂಪನ್ ಬಹುಮಾನ ಗೆದ್ದಿರುವುದಾಗಿ ಹೇಳಿದ್ದರು. ಅಲ್ಲದೆ, ಅದರಲ್ಲೊಂದು ಮೊಬೈಲ್ ನಂಬರ್ ಕೊಟ್ಟಿದ್ದು, ಅದಕ್ಕೆ ಸಂಪರ್ಕಿಸಿದಾಗ ಆನಂದ್ ಎಂದು ತನ್ನನ್ನು ಗುರುತಿಸಿಕೊಂಡ ವ್ಯಕ್ತಿ ಮಾತನಾಡಿದ್ದಾನೆ. ಬಹುಮಾನದ ಹಣ ಪಡೆಯಬೇಕಿದ್ದರೆ, ಕೆಲವೊಂದು ಸರ್ವಿಸ್ ಚಾರ್ಜ್ ಕೊಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಅದರಂತೆ, ಸರ್ವಿಸ್ ಚಾರ್ಜ್ ಹೆಸರಲ್ಲಿ ಪೂರ್ಣಿಮಾ ಅವರು ಹಣವನ್ನು ಕೊಡುತ್ತಾ ಹೋಗಿದ್ದು, ಮೇ 20ರಿಂದ ಆಗಸ್ಟ್ 12ರ ವರೆಗೆ ಬರೋಬ್ಬರಿ 15.33 ಲಕ್ಷ ರೂಪಾಯಿ ಕಳಕೊಂಡಿದ್ದಾರೆ. ಸರ್ವಿಸ್ ಚಾರ್ಜ್, ಎನ್ಓಸಿ, ಎಲ್ ಓಸಿ, ಸರ್ಚಾರ್ಜ್, ಸೆಕ್ಯುರಿಟಿ ಡಿಪಾಸಿಟ್, ಜಿಎಸ್ಟಿ, ಸೆಂಟ್ರಲ್ ಟ್ಯಾಕ್ಸ್ ಎಂದು ಬೇರೆ ಬೇರೆ ರೀತಿಯಲ್ಲಿ ಚಾರ್ಜ್ ಅನ್ನುವ ಹೆಸರಲ್ಲಿ ಹಣವನ್ನು ಪಡೆದಿದ್ದು, ಇಷ್ಟು ಕಟ್ಟಿದ ಬಳಿಕ ಮುಂದಿನದನ್ನು ಕಟ್ಟದೇ ಹೋದರೆ ಕೊಟ್ಟಿದ್ದೂ ಹೋಗುತ್ತದೆ ಎಂಬ ಭಯದಲ್ಲಿ ಹಣ ನೀಡುತ್ತಾ ಹೋಗಿದ್ದಾರೆ.
ಮೂರು ತಿಂಗಳಲ್ಲಿ ಹಣ ಕೊಟ್ಟು ಮೋಸ ಹೋದ ಮಹಿಳೆಗೆ ಕೊನೆಗೂ ಜ್ಞಾನೋದಯವಾಗಿದ್ದು, ಆನ್ಲೈನ್ ಮೋಸಕ್ಕೆ ಬಿದ್ದು ಹಣ ಕಳಕೊಂಡ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
.
A woman was conned of lacs of rupees in a case of online fraud. Poornima received a scratch and win coupon reportedly from Naptol company through post. It was mentioned in the coupon that she has won Rs 14.8 lac. When Poornima contacted the mobile number on the coupon, a person who introduced himself as Anand made her believe in the deal.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm