ಬ್ರೇಕಿಂಗ್ ನ್ಯೂಸ್
22-08-22 11:30 am HK News Desk ಕ್ರೈಂ
ಮಂಡ್ಯ, ಆಗಸ್ಟ್ 22 : ಹನಿಟ್ರ್ಯಾಪ್ ಜಾಲಕ್ಕೆ ಬಿದ್ದ ಮಂಗಳೂರು ಮೂಲದ ಬಿಜೆಪಿ ಮುಖಂಡರೊಬ್ಬರು 50 ಲಕ್ಷ ಕಳಕೊಂಡಿದ್ದಲ್ಲದೆ, ಮತ್ತಷ್ಟು ಹಣಕ್ಕಾಗಿ ಪೀಡನೆಗೊಳಗಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಪೊಲೀಸರು ತನಿಖೆ ನಡೆಸಿದ ಸಂದರ್ಭದಲ್ಲಿ ಸಮಾಜಸೇವೆಯ ಸೋಗು ಹಾಕಿದ್ದ ಮಹಿಳೆ ಸೇರಿದಂತೆ ಇಬ್ಬರನ್ನು ಸೆರೆಯಾಗಿದ್ದಾರೆ.
ಮಂಡ್ಯದಲ್ಲಿ ಶ್ರೀನಿಧಿ ಗೋಲ್ಡ್ ಜುವೆಲ್ಲರಿ ಹೊಂದಿರುವ ಮತ್ತು ಬಿಜೆಪಿಯಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಜಿಲ್ಲಾ ಸಂಚಾಲಕನಾಗಿರುವ ಜಗನ್ನಾಥ ಎಸ್. ಶೆಟ್ಟಿ ಹನಿಟ್ರ್ಯಾಪ್ಗೆ ಒಳಗಾದ ವ್ಯಕ್ತಿ. ಮಂಡ್ಯದ ಸುಭಾಷ್ ನಗರದ 8ನೇ ಕ್ರಾಸ್ ನಿವಾಸಿ ಸಲ್ಮಾಬಾನು ಮತ್ತು ಜಯಂತ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಸಲ್ಮಾಬಾನು ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾಗಿದ್ದು, ಇತರ ಮೂವರು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ. ತಿಂಗಳ ಹಿಂದೆ ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ಸಿಗೆ ನಿಂತಿದ್ದಾಗ, ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಚಿನ್ನದ ಸರದ ವಿಚಾರದಲ್ಲಿ ಮಾತಿಗೆ ಬಂದು ಪರೀಕ್ಷೆಗೆಂದು ಹೊಟೇಲಿಗೆ ಕರೆದೊಯ್ದಿದ್ದಾರೆ. ಬಳಿಕ ಜಗನ್ನಾಥ ಶೆಟ್ಟಿ ಅವರ ಜೊತೆ ಲಾಡ್ಜ್ ರೂಮ್ ಗೆ ಹೋಗಿದ್ದು ಅಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿ ನಾಲ್ಕು ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದರು. ಆದರೆ ಇಷ್ಟಕ್ಕೆ ಸುಮ್ಮನಾಗದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದು ಇದರಿಂದ ರೋಸಿಹೋದ ಜಗನ್ನಾಥ ಶೆಟ್ಟಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಬಾನು ಎಂಬಾಕೆಯನ್ನು ಮತ್ತು ಆಕೆಗೆ ಸಾಥ್ ನೀಡಿದ್ದ ಜಯಂತ್ ಎಂಬಾತನನ್ನು ಬಂಧಿಸಿದ್ದಾರೆ.
Mangalore BJP leader Jaganath Shetty hooked in Honeytrap in Mandya after which he loses 50 lakhs and later he was blackmailed for more money later after police complaint the two have been arrested.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm