ಬ್ರೇಕಿಂಗ್ ನ್ಯೂಸ್
22-08-22 11:30 am HK News Desk ಕ್ರೈಂ
ಮಂಡ್ಯ, ಆಗಸ್ಟ್ 22 : ಹನಿಟ್ರ್ಯಾಪ್ ಜಾಲಕ್ಕೆ ಬಿದ್ದ ಮಂಗಳೂರು ಮೂಲದ ಬಿಜೆಪಿ ಮುಖಂಡರೊಬ್ಬರು 50 ಲಕ್ಷ ಕಳಕೊಂಡಿದ್ದಲ್ಲದೆ, ಮತ್ತಷ್ಟು ಹಣಕ್ಕಾಗಿ ಪೀಡನೆಗೊಳಗಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಪೊಲೀಸರು ತನಿಖೆ ನಡೆಸಿದ ಸಂದರ್ಭದಲ್ಲಿ ಸಮಾಜಸೇವೆಯ ಸೋಗು ಹಾಕಿದ್ದ ಮಹಿಳೆ ಸೇರಿದಂತೆ ಇಬ್ಬರನ್ನು ಸೆರೆಯಾಗಿದ್ದಾರೆ.
ಮಂಡ್ಯದಲ್ಲಿ ಶ್ರೀನಿಧಿ ಗೋಲ್ಡ್ ಜುವೆಲ್ಲರಿ ಹೊಂದಿರುವ ಮತ್ತು ಬಿಜೆಪಿಯಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಜಿಲ್ಲಾ ಸಂಚಾಲಕನಾಗಿರುವ ಜಗನ್ನಾಥ ಎಸ್. ಶೆಟ್ಟಿ ಹನಿಟ್ರ್ಯಾಪ್ಗೆ ಒಳಗಾದ ವ್ಯಕ್ತಿ. ಮಂಡ್ಯದ ಸುಭಾಷ್ ನಗರದ 8ನೇ ಕ್ರಾಸ್ ನಿವಾಸಿ ಸಲ್ಮಾಬಾನು ಮತ್ತು ಜಯಂತ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಸಲ್ಮಾಬಾನು ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾಗಿದ್ದು, ಇತರ ಮೂವರು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ. ತಿಂಗಳ ಹಿಂದೆ ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ಸಿಗೆ ನಿಂತಿದ್ದಾಗ, ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಚಿನ್ನದ ಸರದ ವಿಚಾರದಲ್ಲಿ ಮಾತಿಗೆ ಬಂದು ಪರೀಕ್ಷೆಗೆಂದು ಹೊಟೇಲಿಗೆ ಕರೆದೊಯ್ದಿದ್ದಾರೆ. ಬಳಿಕ ಜಗನ್ನಾಥ ಶೆಟ್ಟಿ ಅವರ ಜೊತೆ ಲಾಡ್ಜ್ ರೂಮ್ ಗೆ ಹೋಗಿದ್ದು ಅಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿ ನಾಲ್ಕು ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದರು. ಆದರೆ ಇಷ್ಟಕ್ಕೆ ಸುಮ್ಮನಾಗದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದು ಇದರಿಂದ ರೋಸಿಹೋದ ಜಗನ್ನಾಥ ಶೆಟ್ಟಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಬಾನು ಎಂಬಾಕೆಯನ್ನು ಮತ್ತು ಆಕೆಗೆ ಸಾಥ್ ನೀಡಿದ್ದ ಜಯಂತ್ ಎಂಬಾತನನ್ನು ಬಂಧಿಸಿದ್ದಾರೆ.
Mangalore BJP leader Jaganath Shetty hooked in Honeytrap in Mandya after which he loses 50 lakhs and later he was blackmailed for more money later after police complaint the two have been arrested.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm