ಬ್ರೇಕಿಂಗ್ ನ್ಯೂಸ್
22-08-22 11:30 am HK News Desk ಕ್ರೈಂ
ಮಂಡ್ಯ, ಆಗಸ್ಟ್ 22 : ಹನಿಟ್ರ್ಯಾಪ್ ಜಾಲಕ್ಕೆ ಬಿದ್ದ ಮಂಗಳೂರು ಮೂಲದ ಬಿಜೆಪಿ ಮುಖಂಡರೊಬ್ಬರು 50 ಲಕ್ಷ ಕಳಕೊಂಡಿದ್ದಲ್ಲದೆ, ಮತ್ತಷ್ಟು ಹಣಕ್ಕಾಗಿ ಪೀಡನೆಗೊಳಗಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಪೊಲೀಸರು ತನಿಖೆ ನಡೆಸಿದ ಸಂದರ್ಭದಲ್ಲಿ ಸಮಾಜಸೇವೆಯ ಸೋಗು ಹಾಕಿದ್ದ ಮಹಿಳೆ ಸೇರಿದಂತೆ ಇಬ್ಬರನ್ನು ಸೆರೆಯಾಗಿದ್ದಾರೆ.
ಮಂಡ್ಯದಲ್ಲಿ ಶ್ರೀನಿಧಿ ಗೋಲ್ಡ್ ಜುವೆಲ್ಲರಿ ಹೊಂದಿರುವ ಮತ್ತು ಬಿಜೆಪಿಯಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಜಿಲ್ಲಾ ಸಂಚಾಲಕನಾಗಿರುವ ಜಗನ್ನಾಥ ಎಸ್. ಶೆಟ್ಟಿ ಹನಿಟ್ರ್ಯಾಪ್ಗೆ ಒಳಗಾದ ವ್ಯಕ್ತಿ. ಮಂಡ್ಯದ ಸುಭಾಷ್ ನಗರದ 8ನೇ ಕ್ರಾಸ್ ನಿವಾಸಿ ಸಲ್ಮಾಬಾನು ಮತ್ತು ಜಯಂತ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಸಲ್ಮಾಬಾನು ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾಗಿದ್ದು, ಇತರ ಮೂವರು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ. ತಿಂಗಳ ಹಿಂದೆ ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ಸಿಗೆ ನಿಂತಿದ್ದಾಗ, ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಚಿನ್ನದ ಸರದ ವಿಚಾರದಲ್ಲಿ ಮಾತಿಗೆ ಬಂದು ಪರೀಕ್ಷೆಗೆಂದು ಹೊಟೇಲಿಗೆ ಕರೆದೊಯ್ದಿದ್ದಾರೆ. ಬಳಿಕ ಜಗನ್ನಾಥ ಶೆಟ್ಟಿ ಅವರ ಜೊತೆ ಲಾಡ್ಜ್ ರೂಮ್ ಗೆ ಹೋಗಿದ್ದು ಅಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿ ನಾಲ್ಕು ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದರು. ಆದರೆ ಇಷ್ಟಕ್ಕೆ ಸುಮ್ಮನಾಗದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದು ಇದರಿಂದ ರೋಸಿಹೋದ ಜಗನ್ನಾಥ ಶೆಟ್ಟಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಬಾನು ಎಂಬಾಕೆಯನ್ನು ಮತ್ತು ಆಕೆಗೆ ಸಾಥ್ ನೀಡಿದ್ದ ಜಯಂತ್ ಎಂಬಾತನನ್ನು ಬಂಧಿಸಿದ್ದಾರೆ.
Mangalore BJP leader Jaganath Shetty hooked in Honeytrap in Mandya after which he loses 50 lakhs and later he was blackmailed for more money later after police complaint the two have been arrested.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm