ಬ್ರೇಕಿಂಗ್ ನ್ಯೂಸ್
22-08-22 11:30 am HK News Desk ಕ್ರೈಂ
ಮಂಡ್ಯ, ಆಗಸ್ಟ್ 22 : ಹನಿಟ್ರ್ಯಾಪ್ ಜಾಲಕ್ಕೆ ಬಿದ್ದ ಮಂಗಳೂರು ಮೂಲದ ಬಿಜೆಪಿ ಮುಖಂಡರೊಬ್ಬರು 50 ಲಕ್ಷ ಕಳಕೊಂಡಿದ್ದಲ್ಲದೆ, ಮತ್ತಷ್ಟು ಹಣಕ್ಕಾಗಿ ಪೀಡನೆಗೊಳಗಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಪೊಲೀಸರು ತನಿಖೆ ನಡೆಸಿದ ಸಂದರ್ಭದಲ್ಲಿ ಸಮಾಜಸೇವೆಯ ಸೋಗು ಹಾಕಿದ್ದ ಮಹಿಳೆ ಸೇರಿದಂತೆ ಇಬ್ಬರನ್ನು ಸೆರೆಯಾಗಿದ್ದಾರೆ.
ಮಂಡ್ಯದಲ್ಲಿ ಶ್ರೀನಿಧಿ ಗೋಲ್ಡ್ ಜುವೆಲ್ಲರಿ ಹೊಂದಿರುವ ಮತ್ತು ಬಿಜೆಪಿಯಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಜಿಲ್ಲಾ ಸಂಚಾಲಕನಾಗಿರುವ ಜಗನ್ನಾಥ ಎಸ್. ಶೆಟ್ಟಿ ಹನಿಟ್ರ್ಯಾಪ್ಗೆ ಒಳಗಾದ ವ್ಯಕ್ತಿ. ಮಂಡ್ಯದ ಸುಭಾಷ್ ನಗರದ 8ನೇ ಕ್ರಾಸ್ ನಿವಾಸಿ ಸಲ್ಮಾಬಾನು ಮತ್ತು ಜಯಂತ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಸಲ್ಮಾಬಾನು ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾಗಿದ್ದು, ಇತರ ಮೂವರು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ. ತಿಂಗಳ ಹಿಂದೆ ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ಸಿಗೆ ನಿಂತಿದ್ದಾಗ, ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಚಿನ್ನದ ಸರದ ವಿಚಾರದಲ್ಲಿ ಮಾತಿಗೆ ಬಂದು ಪರೀಕ್ಷೆಗೆಂದು ಹೊಟೇಲಿಗೆ ಕರೆದೊಯ್ದಿದ್ದಾರೆ. ಬಳಿಕ ಜಗನ್ನಾಥ ಶೆಟ್ಟಿ ಅವರ ಜೊತೆ ಲಾಡ್ಜ್ ರೂಮ್ ಗೆ ಹೋಗಿದ್ದು ಅಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿ ನಾಲ್ಕು ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದರು. ಆದರೆ ಇಷ್ಟಕ್ಕೆ ಸುಮ್ಮನಾಗದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದು ಇದರಿಂದ ರೋಸಿಹೋದ ಜಗನ್ನಾಥ ಶೆಟ್ಟಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಬಾನು ಎಂಬಾಕೆಯನ್ನು ಮತ್ತು ಆಕೆಗೆ ಸಾಥ್ ನೀಡಿದ್ದ ಜಯಂತ್ ಎಂಬಾತನನ್ನು ಬಂಧಿಸಿದ್ದಾರೆ.
Mangalore BJP leader Jaganath Shetty hooked in Honeytrap in Mandya after which he loses 50 lakhs and later he was blackmailed for more money later after police complaint the two have been arrested.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm