ಬ್ರೇಕಿಂಗ್ ನ್ಯೂಸ್
22-08-22 11:30 am HK News Desk ಕ್ರೈಂ
ಮಂಡ್ಯ, ಆಗಸ್ಟ್ 22 : ಹನಿಟ್ರ್ಯಾಪ್ ಜಾಲಕ್ಕೆ ಬಿದ್ದ ಮಂಗಳೂರು ಮೂಲದ ಬಿಜೆಪಿ ಮುಖಂಡರೊಬ್ಬರು 50 ಲಕ್ಷ ಕಳಕೊಂಡಿದ್ದಲ್ಲದೆ, ಮತ್ತಷ್ಟು ಹಣಕ್ಕಾಗಿ ಪೀಡನೆಗೊಳಗಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಪೊಲೀಸರು ತನಿಖೆ ನಡೆಸಿದ ಸಂದರ್ಭದಲ್ಲಿ ಸಮಾಜಸೇವೆಯ ಸೋಗು ಹಾಕಿದ್ದ ಮಹಿಳೆ ಸೇರಿದಂತೆ ಇಬ್ಬರನ್ನು ಸೆರೆಯಾಗಿದ್ದಾರೆ.
ಮಂಡ್ಯದಲ್ಲಿ ಶ್ರೀನಿಧಿ ಗೋಲ್ಡ್ ಜುವೆಲ್ಲರಿ ಹೊಂದಿರುವ ಮತ್ತು ಬಿಜೆಪಿಯಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಜಿಲ್ಲಾ ಸಂಚಾಲಕನಾಗಿರುವ ಜಗನ್ನಾಥ ಎಸ್. ಶೆಟ್ಟಿ ಹನಿಟ್ರ್ಯಾಪ್ಗೆ ಒಳಗಾದ ವ್ಯಕ್ತಿ. ಮಂಡ್ಯದ ಸುಭಾಷ್ ನಗರದ 8ನೇ ಕ್ರಾಸ್ ನಿವಾಸಿ ಸಲ್ಮಾಬಾನು ಮತ್ತು ಜಯಂತ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಸಲ್ಮಾಬಾನು ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾಗಿದ್ದು, ಇತರ ಮೂವರು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ. ತಿಂಗಳ ಹಿಂದೆ ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ಸಿಗೆ ನಿಂತಿದ್ದಾಗ, ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಚಿನ್ನದ ಸರದ ವಿಚಾರದಲ್ಲಿ ಮಾತಿಗೆ ಬಂದು ಪರೀಕ್ಷೆಗೆಂದು ಹೊಟೇಲಿಗೆ ಕರೆದೊಯ್ದಿದ್ದಾರೆ. ಬಳಿಕ ಜಗನ್ನಾಥ ಶೆಟ್ಟಿ ಅವರ ಜೊತೆ ಲಾಡ್ಜ್ ರೂಮ್ ಗೆ ಹೋಗಿದ್ದು ಅಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿ ನಾಲ್ಕು ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದರು. ಆದರೆ ಇಷ್ಟಕ್ಕೆ ಸುಮ್ಮನಾಗದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದು ಇದರಿಂದ ರೋಸಿಹೋದ ಜಗನ್ನಾಥ ಶೆಟ್ಟಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಬಾನು ಎಂಬಾಕೆಯನ್ನು ಮತ್ತು ಆಕೆಗೆ ಸಾಥ್ ನೀಡಿದ್ದ ಜಯಂತ್ ಎಂಬಾತನನ್ನು ಬಂಧಿಸಿದ್ದಾರೆ.
Mangalore BJP leader Jaganath Shetty hooked in Honeytrap in Mandya after which he loses 50 lakhs and later he was blackmailed for more money later after police complaint the two have been arrested.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am