ಬ್ರೇಕಿಂಗ್ ನ್ಯೂಸ್
22-08-22 01:10 pm HK News Desk ಕ್ರೈಂ
ಗದಗ, ಆಗಸ್ಟ್ 22: ಪಿಎಸ್ಐ ಅಕ್ರಮದ ಗಬ್ಬುನಾತ ಆರುವ ಮುನ್ನವೇ ಮತ್ತೊಂದು ಇಲಾಖೆಯಲ್ಲಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು ಅಕ್ರಮದ ಆರೋಪ ಕೇಳಿಬಂದಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆದಿದ್ದ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆಗಸ್ಟ್ 7ರಂದು ಗದಗ-ಬೆಟಗೇರಿ ಸೇರಿದಂತೆ 21 ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆದಿತ್ತು. ಆ ಪೈಕಿ ಗದಗ ನಗರದ ಮುನ್ಸಿಪಲ್ ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎನ್ನಲಾಗುತ್ತಿದ್ದು ತಂದೆ, ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಮುನಿಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವಣೆ ಮತ್ತು ಅವರ ಮಗ ಸಮೀತ್ ಕುಮಾರ್ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗಿದ್ದು ಅವರಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸಮಿತ್ ಕುಮಾರ್ ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಕೊಟ್ಟು ಮೊಬೈಲ್ ನಲ್ಲಿ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದಾನೆ. ಆಬಳಿಕ ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಆತನ ತಂದೆಯೇ ಕಾಲೇಜಿನ ಉಪ ಪ್ರಾಂಶುಪಾಲ ಆಗಿರುವುದರಿಂದ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಕಾಲೇಜಿನ ಪ್ರಾಂಶುಪಾಲ ಎಸ್.ಎಸ್. ಕುಲಕರ್ಣಿ ಅವರನ್ನು ಕೂಡ ವಿಚಾರಣೆಗೆ ಕರೆಸಿದ್ದಾರೆ.
ಸದ್ಯ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ತಂದೆ-ಮಗನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪರೀಕ್ಷೆ ಮುಗಿದ ಬಳಿಕ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವುದರಿಂದ ಕೆಪಿಟಿಸಿಎಲ್ ನಲ್ಲೂ ಪಿಎಸ್ಐ ಹಗರಣದ ಮಾದರಿಯಲ್ಲೇ ಅಕ್ರಮ ನಡೆದಿದ್ಯಾ ಎನ್ನುವ ಶಂಕೆ ವ್ಯಕ್ತವಾಗಿದೆ.
The Karnataka Police have arrested the vice-principal of a municipal college in Gadag-Betageri and his son for allegedly leaking the question paper of a competitive examination held to hire junior assistants for Karnataka Power Transmission Corporation Limited (KPTCL), officials said Monday. The police have taken Maruti Sonavane, the vice-principal of Gadag Municipal College, and his son Samith Kumar in custody for further questioning.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm