ಬ್ರೇಕಿಂಗ್ ನ್ಯೂಸ್
22-08-22 01:10 pm HK News Desk ಕ್ರೈಂ
ಗದಗ, ಆಗಸ್ಟ್ 22: ಪಿಎಸ್ಐ ಅಕ್ರಮದ ಗಬ್ಬುನಾತ ಆರುವ ಮುನ್ನವೇ ಮತ್ತೊಂದು ಇಲಾಖೆಯಲ್ಲಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು ಅಕ್ರಮದ ಆರೋಪ ಕೇಳಿಬಂದಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆದಿದ್ದ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆಗಸ್ಟ್ 7ರಂದು ಗದಗ-ಬೆಟಗೇರಿ ಸೇರಿದಂತೆ 21 ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆದಿತ್ತು. ಆ ಪೈಕಿ ಗದಗ ನಗರದ ಮುನ್ಸಿಪಲ್ ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎನ್ನಲಾಗುತ್ತಿದ್ದು ತಂದೆ, ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಮುನಿಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವಣೆ ಮತ್ತು ಅವರ ಮಗ ಸಮೀತ್ ಕುಮಾರ್ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗಿದ್ದು ಅವರಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸಮಿತ್ ಕುಮಾರ್ ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಕೊಟ್ಟು ಮೊಬೈಲ್ ನಲ್ಲಿ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದಾನೆ. ಆಬಳಿಕ ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಆತನ ತಂದೆಯೇ ಕಾಲೇಜಿನ ಉಪ ಪ್ರಾಂಶುಪಾಲ ಆಗಿರುವುದರಿಂದ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಕಾಲೇಜಿನ ಪ್ರಾಂಶುಪಾಲ ಎಸ್.ಎಸ್. ಕುಲಕರ್ಣಿ ಅವರನ್ನು ಕೂಡ ವಿಚಾರಣೆಗೆ ಕರೆಸಿದ್ದಾರೆ.
ಸದ್ಯ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ತಂದೆ-ಮಗನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪರೀಕ್ಷೆ ಮುಗಿದ ಬಳಿಕ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವುದರಿಂದ ಕೆಪಿಟಿಸಿಎಲ್ ನಲ್ಲೂ ಪಿಎಸ್ಐ ಹಗರಣದ ಮಾದರಿಯಲ್ಲೇ ಅಕ್ರಮ ನಡೆದಿದ್ಯಾ ಎನ್ನುವ ಶಂಕೆ ವ್ಯಕ್ತವಾಗಿದೆ.
The Karnataka Police have arrested the vice-principal of a municipal college in Gadag-Betageri and his son for allegedly leaking the question paper of a competitive examination held to hire junior assistants for Karnataka Power Transmission Corporation Limited (KPTCL), officials said Monday. The police have taken Maruti Sonavane, the vice-principal of Gadag Municipal College, and his son Samith Kumar in custody for further questioning.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm