ಬ್ರೇಕಿಂಗ್ ನ್ಯೂಸ್
23-08-22 12:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ದೇಶದ್ರೋಹದ ಕೇಸ್ ಜಡಿದಿರುವ ಸಂಪಿಗೆಹಳ್ಳಿ ಪೊಲೀಸರು ತನಿಖೆ ಚುರುಕು ಮಾಡಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬಳ್ಳಾರಿ ಮೂಲದ ಸೌರಭ್ ಹಾಗೂ ಬೆಂಗಳೂರಿನ ಸಹಕಾರ ನಗರದ ರಾಹುಲ್ ಎಂಬ ಇಬ್ಬರನ್ನು ತನಿಖೆಗೆ ಒಳಪಡಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ನ Karle Infra Pvt. Ltd ಕಂಪನಿಯಲ್ಲಿ ಕೆಲ್ಸ ಮಾಡ್ತಿದ್ದ ಸೌರಭ್ ಮತ್ತು ಆತನ ಗೆಳೆಯರು ಕೃತ್ಯ ಎಸಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದು ತಮಾಷೆ ಮಾಡೋದಕ್ಕೆ ಹೋಗಿ ಈ ರೀತಿ ಆಯ್ತು ಅಂಥ ಹೇಳಿಕೆ ನೀಡಿದ್ದಾರೆ.

ನಿಮಗೆ ತಾಕತ್ ಇದ್ರೆ ಪಾಕ್ ಪರ ಘೋಷಣೆ ಕೂಗಿ ಎಂದು ಗೆಳೆಯರ ನಡುವೆ ಸವಾಲು ಆಗಿತ್ತು. ಕ್ಲಬ್ ಹೌಸ್ನಲ್ಲಿ ಈ ಬಗ್ಗೆ ವಾರ್ ನಡೆಯುತ್ತಿದ್ದಾಗಲೇ, ಕೆಲ ಯುವಕರು ಸೇರಿ ಹುಚ್ಚಾಟ ಮೆರೆದಿದ್ದರು. ನಮ್ಮ ತಾಕತ್ ಬಗ್ಗೆ ಪ್ರಶ್ನೆ ಮಾಡ್ತೀರಾ ಎಂದು ಹೇಳಿ, ನಾವು ಹೇಳಿದ್ದನ್ನೇ ಮಾಡಿ ತೋರಿಸುತ್ತೇವೆಂದು ಪಾಕ್ ಪರ ಘೋಷಣೆ ಕೂಗಿದ್ದರು. ತಮಾಷೆ ಮಾಡೋಕೆ ಹೋಗಿ ಪಾಕ್ ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಲ್ಲದೆ, ಈಗ ಕಂಬಿ ಎಣಿಸುವಂತಾಗಿದೆ.

ಪ್ರಕರಣ ಸಂಬಂಧ ಇನ್ನೂ ಮೂವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ದೇಶದ್ರೋಹ ವಿಚಾರದಲ್ಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 153ಎ (ಧರ್ಮ, ಬಣ್ಣದ ವಿಚಾರದಲ್ಲಿ ಎತ್ತಿ ಕಟ್ಟುವುದು, ದ್ವೇಷಕ್ಕೆ ಪ್ರಚೋದನೆ) ಅಡಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ.
Pro Pakistan slogans on club house in Bangalore two techies arrested in Bangalore. Recently a video had gone viral in which Bangalore techies were found shouting pro pak slogans.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm