ಬ್ರೇಕಿಂಗ್ ನ್ಯೂಸ್
23-08-22 12:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ದೇಶದ್ರೋಹದ ಕೇಸ್ ಜಡಿದಿರುವ ಸಂಪಿಗೆಹಳ್ಳಿ ಪೊಲೀಸರು ತನಿಖೆ ಚುರುಕು ಮಾಡಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬಳ್ಳಾರಿ ಮೂಲದ ಸೌರಭ್ ಹಾಗೂ ಬೆಂಗಳೂರಿನ ಸಹಕಾರ ನಗರದ ರಾಹುಲ್ ಎಂಬ ಇಬ್ಬರನ್ನು ತನಿಖೆಗೆ ಒಳಪಡಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ನ Karle Infra Pvt. Ltd ಕಂಪನಿಯಲ್ಲಿ ಕೆಲ್ಸ ಮಾಡ್ತಿದ್ದ ಸೌರಭ್ ಮತ್ತು ಆತನ ಗೆಳೆಯರು ಕೃತ್ಯ ಎಸಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದು ತಮಾಷೆ ಮಾಡೋದಕ್ಕೆ ಹೋಗಿ ಈ ರೀತಿ ಆಯ್ತು ಅಂಥ ಹೇಳಿಕೆ ನೀಡಿದ್ದಾರೆ.

ನಿಮಗೆ ತಾಕತ್ ಇದ್ರೆ ಪಾಕ್ ಪರ ಘೋಷಣೆ ಕೂಗಿ ಎಂದು ಗೆಳೆಯರ ನಡುವೆ ಸವಾಲು ಆಗಿತ್ತು. ಕ್ಲಬ್ ಹೌಸ್ನಲ್ಲಿ ಈ ಬಗ್ಗೆ ವಾರ್ ನಡೆಯುತ್ತಿದ್ದಾಗಲೇ, ಕೆಲ ಯುವಕರು ಸೇರಿ ಹುಚ್ಚಾಟ ಮೆರೆದಿದ್ದರು. ನಮ್ಮ ತಾಕತ್ ಬಗ್ಗೆ ಪ್ರಶ್ನೆ ಮಾಡ್ತೀರಾ ಎಂದು ಹೇಳಿ, ನಾವು ಹೇಳಿದ್ದನ್ನೇ ಮಾಡಿ ತೋರಿಸುತ್ತೇವೆಂದು ಪಾಕ್ ಪರ ಘೋಷಣೆ ಕೂಗಿದ್ದರು. ತಮಾಷೆ ಮಾಡೋಕೆ ಹೋಗಿ ಪಾಕ್ ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಲ್ಲದೆ, ಈಗ ಕಂಬಿ ಎಣಿಸುವಂತಾಗಿದೆ.

ಪ್ರಕರಣ ಸಂಬಂಧ ಇನ್ನೂ ಮೂವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ದೇಶದ್ರೋಹ ವಿಚಾರದಲ್ಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 153ಎ (ಧರ್ಮ, ಬಣ್ಣದ ವಿಚಾರದಲ್ಲಿ ಎತ್ತಿ ಕಟ್ಟುವುದು, ದ್ವೇಷಕ್ಕೆ ಪ್ರಚೋದನೆ) ಅಡಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ.
Pro Pakistan slogans on club house in Bangalore two techies arrested in Bangalore. Recently a video had gone viral in which Bangalore techies were found shouting pro pak slogans.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am