ಬ್ರೇಕಿಂಗ್ ನ್ಯೂಸ್
06-10-20 11:34 am Headline Karnataka News Network ಕ್ರೈಂ
ಕಾಸರಗೋಡು, ಅಕ್ಟೋಬರ್ 6: ಜಿಲ್ಲಾಧಿಕಾರಿ ನಿವಾಸದ ಬಳಿಯಿಂದಲೇ ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಗಂಧದ ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪದಿಂದ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ. ಸುಮಾರು ಒಂದು ಕ್ವಿಂಟಾಲ್ ಶ್ರೀಗಂಧ ಪತ್ತೆಯಾಗಿದ್ದು ಇದರ ಮೌಲ್ಯ ಸುಮಾರು 2.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇಂದು ಮುಂಜಾನೆ 4.30ರ ಸುಮಾರಿಗೆ ಜಿಲ್ಲಾಧಿಕಾರಿಯ ಮನೆಯಲ್ಲಿ ಕಾರು ಚಾಲಕ ಹಾಗೂ ಗನ್ ಮ್ಯಾನ್ ಎಚ್ಚೆತ್ತಾಗ ಮನೆ ಸಮೀಪ ಭಾರೀ ಶಬ್ದ ಕೇಳಿ ಬಂದಿತ್ತು. ಗನ್ ಮ್ಯಾನ್ ಮತ್ತು ಚಾಲಕ ಹೊರ ಬಂದು ನೋಡಿದಾಗ ಸಮೀಪದ ಮನೆಯಂಗಳದಲ್ಲಿ ಲಾರಿಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸುತ್ತಿರುವುದು ಗಮನಕ್ಕೆ ಬಂದಿದೆ. ಬಳಿಕ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ತೆರಳಿದ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು, ಪೊಲೀಸರ ನೆರವಿನೊಂದಿಗೆ ಅಕ್ರಮವನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಮೆಂಟ್ ಸಾಗಾಟದ ಲಾರಿಯಲ್ಲಿ ವಿಶೇಷ ಕ್ಯಾಬಿನ್ ನಿರ್ಮಿಸಿ ಅದರೊಳಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸಿ ಸಾಗಿಸಲಾಗುತ್ತಿತ್ತು. ಮನೆ ಮಾಲಕ ಹಾಗೂ ಆರೋಪಿಗಳು ದಾಳಿ ಸಂದರ್ಭ ಪರಾರಿಯಾಗಿದ್ದಾರೆ. ಶ್ರೀಗಂಧವನ್ನು ಅರಣ್ಯ ಇಲಾಖೆಗೆ ಹಸ್ತಾ೦ತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm