ಬ್ರೇಕಿಂಗ್ ನ್ಯೂಸ್
06-10-20 11:34 am Headline Karnataka News Network ಕ್ರೈಂ
ಕಾಸರಗೋಡು, ಅಕ್ಟೋಬರ್ 6: ಜಿಲ್ಲಾಧಿಕಾರಿ ನಿವಾಸದ ಬಳಿಯಿಂದಲೇ ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಗಂಧದ ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪದಿಂದ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ. ಸುಮಾರು ಒಂದು ಕ್ವಿಂಟಾಲ್ ಶ್ರೀಗಂಧ ಪತ್ತೆಯಾಗಿದ್ದು ಇದರ ಮೌಲ್ಯ ಸುಮಾರು 2.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇಂದು ಮುಂಜಾನೆ 4.30ರ ಸುಮಾರಿಗೆ ಜಿಲ್ಲಾಧಿಕಾರಿಯ ಮನೆಯಲ್ಲಿ ಕಾರು ಚಾಲಕ ಹಾಗೂ ಗನ್ ಮ್ಯಾನ್ ಎಚ್ಚೆತ್ತಾಗ ಮನೆ ಸಮೀಪ ಭಾರೀ ಶಬ್ದ ಕೇಳಿ ಬಂದಿತ್ತು. ಗನ್ ಮ್ಯಾನ್ ಮತ್ತು ಚಾಲಕ ಹೊರ ಬಂದು ನೋಡಿದಾಗ ಸಮೀಪದ ಮನೆಯಂಗಳದಲ್ಲಿ ಲಾರಿಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸುತ್ತಿರುವುದು ಗಮನಕ್ಕೆ ಬಂದಿದೆ. ಬಳಿಕ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ತೆರಳಿದ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು, ಪೊಲೀಸರ ನೆರವಿನೊಂದಿಗೆ ಅಕ್ರಮವನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಮೆಂಟ್ ಸಾಗಾಟದ ಲಾರಿಯಲ್ಲಿ ವಿಶೇಷ ಕ್ಯಾಬಿನ್ ನಿರ್ಮಿಸಿ ಅದರೊಳಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸಿ ಸಾಗಿಸಲಾಗುತ್ತಿತ್ತು. ಮನೆ ಮಾಲಕ ಹಾಗೂ ಆರೋಪಿಗಳು ದಾಳಿ ಸಂದರ್ಭ ಪರಾರಿಯಾಗಿದ್ದಾರೆ. ಶ್ರೀಗಂಧವನ್ನು ಅರಣ್ಯ ಇಲಾಖೆಗೆ ಹಸ್ತಾ೦ತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm