ಬ್ರೇಕಿಂಗ್ ನ್ಯೂಸ್
06-10-20 11:34 am Headline Karnataka News Network ಕ್ರೈಂ
ಕಾಸರಗೋಡು, ಅಕ್ಟೋಬರ್ 6: ಜಿಲ್ಲಾಧಿಕಾರಿ ನಿವಾಸದ ಬಳಿಯಿಂದಲೇ ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಗಂಧದ ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪದಿಂದ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ. ಸುಮಾರು ಒಂದು ಕ್ವಿಂಟಾಲ್ ಶ್ರೀಗಂಧ ಪತ್ತೆಯಾಗಿದ್ದು ಇದರ ಮೌಲ್ಯ ಸುಮಾರು 2.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇಂದು ಮುಂಜಾನೆ 4.30ರ ಸುಮಾರಿಗೆ ಜಿಲ್ಲಾಧಿಕಾರಿಯ ಮನೆಯಲ್ಲಿ ಕಾರು ಚಾಲಕ ಹಾಗೂ ಗನ್ ಮ್ಯಾನ್ ಎಚ್ಚೆತ್ತಾಗ ಮನೆ ಸಮೀಪ ಭಾರೀ ಶಬ್ದ ಕೇಳಿ ಬಂದಿತ್ತು. ಗನ್ ಮ್ಯಾನ್ ಮತ್ತು ಚಾಲಕ ಹೊರ ಬಂದು ನೋಡಿದಾಗ ಸಮೀಪದ ಮನೆಯಂಗಳದಲ್ಲಿ ಲಾರಿಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸುತ್ತಿರುವುದು ಗಮನಕ್ಕೆ ಬಂದಿದೆ. ಬಳಿಕ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ತೆರಳಿದ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು, ಪೊಲೀಸರ ನೆರವಿನೊಂದಿಗೆ ಅಕ್ರಮವನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಮೆಂಟ್ ಸಾಗಾಟದ ಲಾರಿಯಲ್ಲಿ ವಿಶೇಷ ಕ್ಯಾಬಿನ್ ನಿರ್ಮಿಸಿ ಅದರೊಳಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸಿ ಸಾಗಿಸಲಾಗುತ್ತಿತ್ತು. ಮನೆ ಮಾಲಕ ಹಾಗೂ ಆರೋಪಿಗಳು ದಾಳಿ ಸಂದರ್ಭ ಪರಾರಿಯಾಗಿದ್ದಾರೆ. ಶ್ರೀಗಂಧವನ್ನು ಅರಣ್ಯ ಇಲಾಖೆಗೆ ಹಸ್ತಾ೦ತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 07:32 pm
Mangalore Correspondent
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am