ಬ್ರೇಕಿಂಗ್ ನ್ಯೂಸ್
06-10-20 11:34 am Headline Karnataka News Network ಕ್ರೈಂ
ಕಾಸರಗೋಡು, ಅಕ್ಟೋಬರ್ 6: ಜಿಲ್ಲಾಧಿಕಾರಿ ನಿವಾಸದ ಬಳಿಯಿಂದಲೇ ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಗಂಧದ ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪದಿಂದ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ. ಸುಮಾರು ಒಂದು ಕ್ವಿಂಟಾಲ್ ಶ್ರೀಗಂಧ ಪತ್ತೆಯಾಗಿದ್ದು ಇದರ ಮೌಲ್ಯ ಸುಮಾರು 2.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇಂದು ಮುಂಜಾನೆ 4.30ರ ಸುಮಾರಿಗೆ ಜಿಲ್ಲಾಧಿಕಾರಿಯ ಮನೆಯಲ್ಲಿ ಕಾರು ಚಾಲಕ ಹಾಗೂ ಗನ್ ಮ್ಯಾನ್ ಎಚ್ಚೆತ್ತಾಗ ಮನೆ ಸಮೀಪ ಭಾರೀ ಶಬ್ದ ಕೇಳಿ ಬಂದಿತ್ತು. ಗನ್ ಮ್ಯಾನ್ ಮತ್ತು ಚಾಲಕ ಹೊರ ಬಂದು ನೋಡಿದಾಗ ಸಮೀಪದ ಮನೆಯಂಗಳದಲ್ಲಿ ಲಾರಿಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸುತ್ತಿರುವುದು ಗಮನಕ್ಕೆ ಬಂದಿದೆ. ಬಳಿಕ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ತೆರಳಿದ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು, ಪೊಲೀಸರ ನೆರವಿನೊಂದಿಗೆ ಅಕ್ರಮವನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಮೆಂಟ್ ಸಾಗಾಟದ ಲಾರಿಯಲ್ಲಿ ವಿಶೇಷ ಕ್ಯಾಬಿನ್ ನಿರ್ಮಿಸಿ ಅದರೊಳಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸಿ ಸಾಗಿಸಲಾಗುತ್ತಿತ್ತು. ಮನೆ ಮಾಲಕ ಹಾಗೂ ಆರೋಪಿಗಳು ದಾಳಿ ಸಂದರ್ಭ ಪರಾರಿಯಾಗಿದ್ದಾರೆ. ಶ್ರೀಗಂಧವನ್ನು ಅರಣ್ಯ ಇಲಾಖೆಗೆ ಹಸ್ತಾ೦ತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm