ಬ್ರೇಕಿಂಗ್ ನ್ಯೂಸ್
24-08-22 10:41 pm HK News Desk ಕ್ರೈಂ
ಶಿವಮೊಗ್ಗ, ಆಗಸ್ಟ್ 24 : ಸ್ವಾತಂತ್ರ್ಯ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಉಂಟಾಗಿದ್ದ ಸಾವರ್ಕರ್ ಫೋಟೋ ವಿವಾದವು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕೋಮು ದ್ವೇಷದ ವಾತಾವರಣಕ್ಕೂ ಕಾರಣವಾಗಿತ್ತು. ಸಾವರ್ಕರ್ ಫೋಟೊ ವಿವಾದ ತಣ್ಣಗಾದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮತ್ತೊಂದು ಗಲಭೆ ಸೃಷ್ಟಿಸಲು ಪ್ಲಾನ್ ನಡೆದಿದೆಯಾ ಎಂಬ ಅನುಮಾನ ಮೂಡಿದೆ. ಇದಕ್ಕೆ ಕಾರಣವಾಗಿದ್ದು ಆ ಒಂದು ಪತ್ರ.
ಶಿವಮೊಗ್ಗದ ಗಾಂಧಿ ಬಜಾರ್ ಬಳಿಯ ದೇವಸ್ಥಾನದಲ್ಲಿ ಅನಾಮಿಕ ಪತ್ರ ದೊರಕಿದ್ದು ಇದರಲ್ಲಿ ಗಣೇಶೋತ್ಸವಕ್ಕೂ ಮುನ್ನ ಶಿವಮೊಗ್ಗದಲ್ಲಿ ಮತ್ತೊಂದು ಸಂಘರ್ಷವನ್ನು ನಡೆಸಲು ಹುನ್ನಾರ ನಡೆದಿರುವ ಬಗ್ಗೆ ಹೇಳಲಾಗಿದೆ. ಪತ್ರ ದೊರಕಿದ ತಕ್ಷಣವೇ ಅಲರ್ಟ್ ಆಗಿರುವ ಶಿವಮೊಗ್ಗ ಕೋಟೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಚುರುಕುಗೊಳಿಸಿದ್ದಾರೆ.
ಶಿವಮೊಗ್ಗದ ಗಾಂಧಿ ಬಜಾರಿನ ಗಂಗಾ ಪರಮೇಶ್ವರ ದೇವಸ್ಥಾನದ ಬಳಿ ಪತ್ರ ಸಿಕ್ಕಿದೆ. ದೇವಾಲಯದ ಪಕ್ಕದಲ್ಲಿಯೇ ಅಂಗಡಿ ನಡೆಸುತ್ತಿರುವ ವ್ಯಕ್ತಿಯೊಬ್ಬರು ಅಂಗಡಿ ಬಂದ್ ಮಾಡಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪತ್ರ ಕಣ್ಣಿಗೆ ಬಿದ್ದಿದೆ. ಪೊಲೀಸ್ ಇಲಾಖೆಗೆ ಈ ಪತ್ರವನ್ನು ಕೊಟ್ಟು ಕೋಮು ಗಲಭೆ ತಪ್ಪಿಸಿ, ಮೂವರ ಪ್ರಾಣ ಉಳಿಸಿ ಎಂದು ಪತ್ರದಲ್ಲಿ ಬರೆಯಲಾಗಿದೆ.
ಪತ್ರವನ್ನು ಓದಿದ ಕೂಡಲೇ ಅಂಗಡಿ ಮಾಲೀಕ ಕೋಟೆ ಠಾಣೆಗೆ ತೆರಳಿ ಪೊಲೀಸರಿಗೆ ನೀಡಿದ್ದಾರೆ. ಅಲ್ಲದೆ, ಯಾರೋ ಅಪರಿಚಿತರು ಶಿವಮೊಗ್ಗದಲ್ಲಿ ಮತ್ತೊಂದು ಗಲಭೆ ನಡೆಸಲು ಸಂಚು ಮಾಡಿದ್ದಾರೆ ಎಂದು ಆರೋಪಿಸಿ ದೂರನ್ನು ದಾಖಲಿಸಿದ್ದಾರೆ. ಪತ್ರದಲ್ಲಿ ಅಪರಿಚಿತ ವ್ಯಕ್ತಿ ಗಲಭೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಗಾಂಧಿ ಬಜಾರ್ ಬಳಿ ಮೂವರು ಗಾಂಜಾ ಸೇದುತ್ತಾ ಮಾತನಾಡಿಕೊಳ್ಳುತ್ತಿದ್ದರು. ಮೂವರು ಮಾತನಾಡಿರುವುದನ್ನು ಕೇಳಿಸಿಕೊಂಡು ಭಯಕ್ಕೊಳಗಾಗಿದ್ದೇನೆ. ಮೂವರನ್ನು ಮಂಗಳೂರಿನಿಂದ ಕರೆಸಬೇಕು. ಅವರು ಮೊಬೈಲ್ ಫೋನ್ ಬಳಕೆ ಮಾಡಬಾರದು. ಯಾವುದೇ ಕಾರಣಕ್ಕೂ ಸ್ಥಳೀಯರಿಗೆ ಈ ವಿಚಾರ ತಿಳಿಯಬಾರದು. ಗಲಾಟೆ ನಡೆದರೆ ಮಾತ್ರ ಗಣೇಶೋತ್ಸವ ಆಚರಣೆ ತಡೆಯೋಕೆ ಸಾಧ್ಯ ಎಂದು ಯುವಕರು ಹೇಳಿಕೊಂಡಿದ್ದರು ಎಂಬುದಾಗಿ ಪತ್ರದಲ್ಲಿ ಬರೆದಿದ್ದಾನೆ.
ಪತ್ರದಲ್ಲಿ ಮೊಹಮ್ಮದ್ ಫೈಸಲ್ ಅಲಿಯಾಸ್ ಚೆನ್ನು ಎಂಬಾತನ ಹೆಸರನ್ನು ಉಲ್ಲೇಖಿಸಿದ್ದಾನೆ. ಈ ವ್ಯಕ್ತಿ ಗಾಂಜಾ ಸೇವನೆ ಮಾಡೋದು ಅಲ್ಲದೆ, ಗಾಂಜಾ ಮಾರಾಟವನ್ನೂ ಮಾಡುತ್ತಾನೆ. ಆಜಾದ್ ನಗರದಲ್ಲಿ ಈತ ರೌಡಿಯಂತೆ ವರ್ತಿಸುತ್ತಾನೆಂದು ಪತ್ರದಲ್ಲಿ ಬರೆಯಲಾಗಿದೆ. ಅನಾಮಧೇಯ ವ್ಯಕ್ತಿಯ ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಶಿವಮೊಗ್ಗ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Shivamogga man writes letter of killing three on ganeshotsav murder plot exposed.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm