ಬ್ರೇಕಿಂಗ್ ನ್ಯೂಸ್
25-08-22 12:49 pm HK News Desk ಕ್ರೈಂ
ಬೆಳಗಾವಿ, ಆಗಸ್ಟ್ 25: ಕೆಪಿಟಿಸಿಎಲ್ ಕಿರಿಯ ಸಹಾಯಕ ಅಭಿಯಂತರ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಬೆಳಗಾವಿ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹುಕ್ಕೇರಿಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ಪರೀಕ್ಷೆ ಬರೆದ ಅಭ್ಯರ್ಥಿಗಳ ಇಬ್ಬರು ಸಂಬಂಧಿಕರನ್ನು ಬಂಧನ ಮಾಡಲಾಗಿದೆ. ಗದಗದಿಂದ ಬಂದಿದ್ದ ಪ್ರಶ್ನೆಪತ್ರಿಕೆಗೆ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಆದೇಶ ನಾಗನೂರಿ ಸ್ವತಃ ಉತ್ತರ ಬಿಡಿಸಿಕೊಟ್ಟಿದ್ದಾನೆ ಎನ್ನಲಾಗುತ್ತಿದೆ. ಈತ ಹುಕ್ಕೇರಿ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ. ಬೈಲಹೊಂಗಲ ತಾಲೂಕಿನ ನಾವಲಗಟ್ಟಿಯ ಮಡಿವಾಳಪ್ಪ ತೋರಣಗಟ್ಟಿ ಮತ್ತು ಹೊಸಕೋಟಿ ಗ್ರಾಮದ ಶಂಕರ ಉಣಕಲ್ ಎಂಬಿಬ್ಬರನ್ನೂ ಬಂಧಿಸಲಾಗಿದೆ. KPTCL ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಬಂಧಿತ ಅತಿಥಿ ಉಪನ್ಯಾಸಕನ ಬಳಿಯಿಂದಲೇ ಅಭ್ಯರ್ಥಿಗಳ ಸಂಬಂಧಿಕರಾದ ಮಡಿವಾಳಪ್ಪ ತೋರಣಗಟ್ಟಿ ಮತ್ತು ಶಂಕರ ಉಣಕಲ್ ಬ್ಲೂಟೂಥ್ ಡಿವೈಸ್ ಪಡೆದಿದ್ದರು. ಆದ್ರೆ ಡಿವೈಸ್ಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ. ಬಂಧಿತರಿಂದ ಒಂದು ಕಾರು ಮತ್ತು ಉತ್ತರಗಳಿದ್ದ ಎರಡು ಡಿವೈಸ್ಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ ಕಿಂಗ್ ಪಿನ್ ಸಂಜು ಭಂಡಾರಿ ಬಳಿಯಿಂದ ಡಿವೈಸ್ ಪಡೆದು ಅತಿಥಿ ಉಪನ್ಯಾಸಕನೇ ಪರೀಕ್ಷಾರ್ಥಿಗಳ ಸಂಬಂಧಿಕರಿಗೆ ನೀಡಿದ್ದ. ಆರು ಲಕ್ಷ ರೂಪಾಯಿಗೆ ಡೀಲ್ ಫೈನಲ್ ಮಾಡಿ ಬ್ಲ್ಯೂಟೂಥ್ ಡಿವೈಸ್ ಪಡೆದಿದ್ದರು ಎಂದು ತನಿಖೆಯಲ್ಲಿ ಪತ್ತೆಯಾಗಿದೆ. ಬೆಳಗಾವಿ ಎಸ್ಪಿ ಡಾ.ಸಂಜೀವ ಪಾಟೀಲ್ ನೇತೃತ್ವದಲ್ಲಿ ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು ತನಿಖೆ ಮುಂದುವರಿದಿದೆ.
The police on Tuesday took three persons into their custody in connection with the alleged malpractice during the recruitment examination held to fill up the posts of junior assistants in KPTCL.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm