ಬ್ರೇಕಿಂಗ್ ನ್ಯೂಸ್
25-08-22 12:49 pm HK News Desk ಕ್ರೈಂ
ಬೆಳಗಾವಿ, ಆಗಸ್ಟ್ 25: ಕೆಪಿಟಿಸಿಎಲ್ ಕಿರಿಯ ಸಹಾಯಕ ಅಭಿಯಂತರ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಬೆಳಗಾವಿ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹುಕ್ಕೇರಿಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ಪರೀಕ್ಷೆ ಬರೆದ ಅಭ್ಯರ್ಥಿಗಳ ಇಬ್ಬರು ಸಂಬಂಧಿಕರನ್ನು ಬಂಧನ ಮಾಡಲಾಗಿದೆ. ಗದಗದಿಂದ ಬಂದಿದ್ದ ಪ್ರಶ್ನೆಪತ್ರಿಕೆಗೆ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಆದೇಶ ನಾಗನೂರಿ ಸ್ವತಃ ಉತ್ತರ ಬಿಡಿಸಿಕೊಟ್ಟಿದ್ದಾನೆ ಎನ್ನಲಾಗುತ್ತಿದೆ. ಈತ ಹುಕ್ಕೇರಿ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ. ಬೈಲಹೊಂಗಲ ತಾಲೂಕಿನ ನಾವಲಗಟ್ಟಿಯ ಮಡಿವಾಳಪ್ಪ ತೋರಣಗಟ್ಟಿ ಮತ್ತು ಹೊಸಕೋಟಿ ಗ್ರಾಮದ ಶಂಕರ ಉಣಕಲ್ ಎಂಬಿಬ್ಬರನ್ನೂ ಬಂಧಿಸಲಾಗಿದೆ. KPTCL ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಬಂಧಿತ ಅತಿಥಿ ಉಪನ್ಯಾಸಕನ ಬಳಿಯಿಂದಲೇ ಅಭ್ಯರ್ಥಿಗಳ ಸಂಬಂಧಿಕರಾದ ಮಡಿವಾಳಪ್ಪ ತೋರಣಗಟ್ಟಿ ಮತ್ತು ಶಂಕರ ಉಣಕಲ್ ಬ್ಲೂಟೂಥ್ ಡಿವೈಸ್ ಪಡೆದಿದ್ದರು. ಆದ್ರೆ ಡಿವೈಸ್ಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ. ಬಂಧಿತರಿಂದ ಒಂದು ಕಾರು ಮತ್ತು ಉತ್ತರಗಳಿದ್ದ ಎರಡು ಡಿವೈಸ್ಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ ಕಿಂಗ್ ಪಿನ್ ಸಂಜು ಭಂಡಾರಿ ಬಳಿಯಿಂದ ಡಿವೈಸ್ ಪಡೆದು ಅತಿಥಿ ಉಪನ್ಯಾಸಕನೇ ಪರೀಕ್ಷಾರ್ಥಿಗಳ ಸಂಬಂಧಿಕರಿಗೆ ನೀಡಿದ್ದ. ಆರು ಲಕ್ಷ ರೂಪಾಯಿಗೆ ಡೀಲ್ ಫೈನಲ್ ಮಾಡಿ ಬ್ಲ್ಯೂಟೂಥ್ ಡಿವೈಸ್ ಪಡೆದಿದ್ದರು ಎಂದು ತನಿಖೆಯಲ್ಲಿ ಪತ್ತೆಯಾಗಿದೆ. ಬೆಳಗಾವಿ ಎಸ್ಪಿ ಡಾ.ಸಂಜೀವ ಪಾಟೀಲ್ ನೇತೃತ್ವದಲ್ಲಿ ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು ತನಿಖೆ ಮುಂದುವರಿದಿದೆ.
The police on Tuesday took three persons into their custody in connection with the alleged malpractice during the recruitment examination held to fill up the posts of junior assistants in KPTCL.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm