ಬ್ರೇಕಿಂಗ್ ನ್ಯೂಸ್
28-08-22 08:18 pm HK News Desk ಕ್ರೈಂ
ಮಧ್ಯಪ್ರದೇಶ, ಆಗಸ್ಟ್ 27: ಅಂತಾರಾಷ್ಟ್ರೀಯ ದರೋಡೆಕೋರರ ಗ್ಯಾಂಗ್ವೊಂದು ಮೊಬೈಲ್ ತುಂಬಿಕೊಂಡು ಹೊರಟಿದ್ದ ಕಂಟೈನರ್ ತಡೆದು, 12 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ದರೋಡೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಕೃತ್ಯ ನಡೆದ ಕೇವಲ 24 ಗಂಟೆಯೊಳಗೆ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಮೊಬೈಲ್ ಫೋನ್ಗಳ ಬಾಕ್ಸ್ ತುಂಬಿಕೊಂಡು ತಮಿಳುನಾಡಿನಿಂದ ಹರಿಯಾಣದ ಗುರುಗ್ರಾಮಕ್ಕೆ ಕಂಟೈನರ್ ಹೊರಟಿತ್ತು. ಈ ವೇಳೆ, ಮಧ್ಯಪ್ರದೇಶದ ಸಾಗರ್ ಎಂಬಲ್ಲಿ ನಾಲ್ವರು ದರೋಡೆಕೋರರು ಕಳ್ಳತನ ಮಾಡಿದ್ದಾರೆ. 12 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಬಾಕ್ಸ್ಗಳನ್ನು ಇನ್ನೊಂದು ಲಾರಿಗೆ ತುಂಬಿಕೊಂಡು ಪರಾರಿಯಾಗಿದ್ದರು. ಇದರ ಬಗ್ಗೆ ಮಾಹಿತಿ ಪೊಲೀಸರಿಗೆ ಗೊತ್ತಾಗುತ್ತಿದ್ದಂತೆ ಕಳ್ಳರಿಗೆ ಬಲೆ ಬೀಸಿದ್ದರು. ಗಡಿ ಜಿಲ್ಲೆ ಹಾಗೂ ಇತರೆ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ. ಈ ವೇಳೆ ಮಧ್ಯಪ್ರದೇಶದ ಇಂದೋರ್ನ ಶಿಪ್ರಾ ಎಂಬಲ್ಲಿ ವಾಹನ ತಪಾಸಣೆ ವೇಳೆ ಲಾರಿ ಸಿಕ್ಕಿಬಿದ್ದಿದೆ. ಇದರ ಬೆನ್ನಲ್ಲೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ಸಂಪೂರ್ಣ ವಿವರ:
ಆಗಸ್ಟ್ 25ರಂದು ಮಧ್ಯಾಹ್ನ 1 ಗಂಟೆಗೆ ಪ್ರತಿಷ್ಠಿತ ಕಂಪನಿಯ ಮೊಬೈಲ್ ತುಂಬಿಕೊಂಡು ತಮಿಳುನಾಡಿನಿಂದ ಗುರುಗ್ರಾಮಗೆ ಕಂಟೈನರ್ ತೆರಳುತ್ತಿತ್ತು. ಈ ವೇಳೆ ಮಹಾರಾಜಪುರದಿಂದ ನಗರ ತಿರಹಾ ನಡುವಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ದರೋಡೆಕೋರರು ತಡೆದು, ಮೊಬೈಲ್ ಕದ್ದಿದ್ದಾರೆ. ಸುದ್ದಿ ತಿಳಿದ ತಕ್ಷಣವೇ ಸಿನಿಮೀಯ ರೀತಿಯಲ್ಲಿ ತನಿಖೆ ಆರಂಭಿಸಿರುವ ಪೊಲೀಸರು ವಿವಿಧ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿದ್ದಾರೆ.
ಇದರ ಬೆನ್ನಲ್ಲೇ ಇಂದೋರ್ ಬಳಿಯ ಶಿಪ್ರಾ ಬಳಿಕ ಕದ್ದ ಸರಕುಗಳ ವಾಹನ ಪತ್ತೆಯಾಗಿದ್ದು, ಆರೋಪಿಗಳು ಲಾರಿ ಬಿಟ್ಟು ಪರಾರಿಯಾಗಿದ್ದಾರೆ. ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಮೊಬೈಲ್ ತುಂಬಿದ್ದ ಕಂಟೈನರ್ ಅನ್ನು ಪಶ್ಚಿಮ ಬಂಗಾಳದ ಚಾಲಕ ಮಿಥುನ್ ಎಂಬಾತ ತೆಗೆದುಕೊಂಡು ಹೋಗುತ್ತಿದ್ದನು. ಘಟನೆಗೆ ಸಂಬಂಧಿಸಿದಂತೆ ಗೌರ್ಜಾಮರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಇದರ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ.
Four unidentified men looted mobile phone handsets worth at least ₹ 12 crore from a Haryana-bound container truck in Madhya Pradesh's Sagar district, police said on Saturday.The looted mobile phones were seized by the police within 24 hours from another truck near Indore, over 400 km away from the spot of the crime, but the robbers are on the run.Sagar superintendent of police Tarun Nayak said the police in Gaurjhamar were informed that four unidentified robbers had abducted a truck near Maharajpur village on the national highway no. 44 on Thursday night.
29-03-24 05:37 pm
HK News Desk
L hanumanthaiah kolar: ಕೋಲಾರದಲ್ಲಿ ಇಬ್ಬರ ಜಗಳದಲ...
29-03-24 03:43 pm
CT Ravi, Amit Shah, Yathindra Siddaramaiah: ಯ...
29-03-24 03:40 pm
ರಾಜ್ಯದಲ್ಲಿ ಬರದ ಬೇಗೆಯ ನಡುವೆ ಉಷ್ಣ ಮಾರುತ ; 5 ದಿನ...
29-03-24 03:03 pm
ಹಾಸನ ; ಐದು ವರ್ಷದಲ್ಲಿ ಪ್ರಜ್ವಲ್ ರೇವಣ್ಣ ಆಸ್ತಿ ನಾ...
28-03-24 11:00 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
29-03-24 07:02 pm
Udupi Correspondent
Bantwal Panchayat secretary goes missing: ಬಂಟ...
29-03-24 01:49 pm
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
29-03-24 06:17 pm
Mangalore Correspondent
ಕೋವಿಡ್ ಸಮಯದಲ್ಲಿ ಉದ್ಯೋಗ ಕಳಕೊಂಡಿದ್ದ ಟೆಕ್ಕಿ ; ಲ...
29-03-24 05:09 pm
Gangster Politician Mukhtar Ansari; 68ಕ್ಕೂ ಅಧ...
29-03-24 09:32 am
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm