ಬ್ರೇಕಿಂಗ್ ನ್ಯೂಸ್
30-08-22 06:06 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 30: ಬೆಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗನ್ನು ಕಳವುಗೈದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಸೋಮವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ ರೈಲು ಮಧ್ಯರಾತ್ರಿ 2.30ರ ಸುಮಾರಿಗೆ ಪುತ್ತೂರು ರೈಲು ನಿಲ್ದಾಣಕ್ಕೆ ತಲುಪಿತ್ತು. ರೈಲು ಇನ್ನೇನು ಹೊರಡಿ ಸ್ವಲ್ಪ ಮುಂದೆ ಸಾಗುವಷ್ಟರಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಕೈಯಲ್ಲಿದ್ದ ವ್ಯಾನಿಟಿ ಬ್ಯಾಗನ್ನು ಕಿತ್ತುಕೊಂಡು ಓಡಿದ್ದಾನೆ.
ಬೆಂಗಳೂರಿನಲ್ಲಿ ವಾಸವಿರುವ ಕಾರವಾರ ಮೂಲದ ಶಿಕ್ಷಕ ದಂಪತಿ ರಮೇಶ್ ಮತ್ತು ನಿರ್ಮಲಾ ಚಿನ್ನಾಭರಣ ಕಳಕೊಂಡವರು. ನಿರ್ಮಲಾ ಅವರು ತಾನು ಮಲಗಿದ್ದ ತಲೆದಿಂಬಿನ ಅಡಿಯಲ್ಲಿ ಬ್ಯಾಗನ್ನು ಇರಿಸಿಕೊಂಡಿದ್ದರು. ಇದನ್ನು ಮೊದಲೇ ಗಮನಿಸಿದ್ದ ವ್ಯಕ್ತಿಯೊಬ್ಬ ವ್ಯಾನಿಟಿ ಬ್ಯಾಗನ್ನು ಹಿಡಿದೆಳೆದಿದ್ದಾನೆ. ಇಷ್ಟರಲ್ಲಿ ರೈಲು ಪುತ್ತೂರು – ಹಾರಾಡಿ ಬ್ರಿಡ್ಜ್ ದಾಟಿ ಮುಂದೆ ಸಿಟಿ ಗುಡ್ಡೆ ತಲುಪಿತ್ತು. ಮಹಿಳೆ ಗಾಬರಿಗೊಂಡು ಆತನನ್ನು ಬೆನ್ನತ್ತಿದ್ದು ಆಗಂತುಕ ರೈಲಿನಿಂದ ಹೊರಕ್ಕೆ ಹಾರಲು ಯತ್ನಿಸಿದ್ದಾನೆ. ಇದೇ ವೇಳೆ, ಮಹಿಳೆ ಬೊಬ್ಬೆ ಹೊಡೆಯುತ್ತಾ ರೈಲಿನ ಚೈನ್ ಎಳೆದಿದ್ದಾರೆ.
ರೈಲು ನಿಧಾನವಾಗುತ್ತಲೇ ವ್ಯಕ್ತಿ ಹೊರಕ್ಕೆ ಹಾರಿದ್ದು, ಕತ್ತಲೆಯಲ್ಲಿ ಪರಾರಿಯಾಗಿದ್ದಾನೆ. ಇದೇ ಮಹಿಳೆಯೂ ಆತನ ಜೊತೆಗೆ ರೈಲಿನಿಂದ ಹಾರಿದ್ದು, ಹಳಿಯ ಮೇಲೆ ಬಿದ್ದು ಗಾಯಗೊಂಡಿದ್ದಾರೆ. ವ್ಯಕ್ತಿ ಕತ್ತಲಲ್ಲಿ ದೂರಕ್ಕೆ ಓಡಿ ಪರಾರಿಯಾಗಿದ್ದ. ಗಾಯಗೊಂಡ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ದೂರಿನಂತೆ, 40 ಸಾವಿರ ರೂ. ನಗದು ಮತ್ತು ಚಿನ್ನಾಭರಣ ಸೇರಿ ಒಟ್ಟು 8 ಲಕ್ಷ ಮೌಲ್ಯದ ಸೊತ್ತು ಕಳವುಗೈದ ಬಗ್ಗೆ ಮಂಗಳೂರು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Robbery in mangalore bangalore train, Vanity bag and gold ornaments worth lakhs stolen near Puttur
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm