ಬ್ರೇಕಿಂಗ್ ನ್ಯೂಸ್
30-08-22 06:06 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 30: ಬೆಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗನ್ನು ಕಳವುಗೈದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಸೋಮವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ ರೈಲು ಮಧ್ಯರಾತ್ರಿ 2.30ರ ಸುಮಾರಿಗೆ ಪುತ್ತೂರು ರೈಲು ನಿಲ್ದಾಣಕ್ಕೆ ತಲುಪಿತ್ತು. ರೈಲು ಇನ್ನೇನು ಹೊರಡಿ ಸ್ವಲ್ಪ ಮುಂದೆ ಸಾಗುವಷ್ಟರಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಕೈಯಲ್ಲಿದ್ದ ವ್ಯಾನಿಟಿ ಬ್ಯಾಗನ್ನು ಕಿತ್ತುಕೊಂಡು ಓಡಿದ್ದಾನೆ.
ಬೆಂಗಳೂರಿನಲ್ಲಿ ವಾಸವಿರುವ ಕಾರವಾರ ಮೂಲದ ಶಿಕ್ಷಕ ದಂಪತಿ ರಮೇಶ್ ಮತ್ತು ನಿರ್ಮಲಾ ಚಿನ್ನಾಭರಣ ಕಳಕೊಂಡವರು. ನಿರ್ಮಲಾ ಅವರು ತಾನು ಮಲಗಿದ್ದ ತಲೆದಿಂಬಿನ ಅಡಿಯಲ್ಲಿ ಬ್ಯಾಗನ್ನು ಇರಿಸಿಕೊಂಡಿದ್ದರು. ಇದನ್ನು ಮೊದಲೇ ಗಮನಿಸಿದ್ದ ವ್ಯಕ್ತಿಯೊಬ್ಬ ವ್ಯಾನಿಟಿ ಬ್ಯಾಗನ್ನು ಹಿಡಿದೆಳೆದಿದ್ದಾನೆ. ಇಷ್ಟರಲ್ಲಿ ರೈಲು ಪುತ್ತೂರು – ಹಾರಾಡಿ ಬ್ರಿಡ್ಜ್ ದಾಟಿ ಮುಂದೆ ಸಿಟಿ ಗುಡ್ಡೆ ತಲುಪಿತ್ತು. ಮಹಿಳೆ ಗಾಬರಿಗೊಂಡು ಆತನನ್ನು ಬೆನ್ನತ್ತಿದ್ದು ಆಗಂತುಕ ರೈಲಿನಿಂದ ಹೊರಕ್ಕೆ ಹಾರಲು ಯತ್ನಿಸಿದ್ದಾನೆ. ಇದೇ ವೇಳೆ, ಮಹಿಳೆ ಬೊಬ್ಬೆ ಹೊಡೆಯುತ್ತಾ ರೈಲಿನ ಚೈನ್ ಎಳೆದಿದ್ದಾರೆ.
ರೈಲು ನಿಧಾನವಾಗುತ್ತಲೇ ವ್ಯಕ್ತಿ ಹೊರಕ್ಕೆ ಹಾರಿದ್ದು, ಕತ್ತಲೆಯಲ್ಲಿ ಪರಾರಿಯಾಗಿದ್ದಾನೆ. ಇದೇ ಮಹಿಳೆಯೂ ಆತನ ಜೊತೆಗೆ ರೈಲಿನಿಂದ ಹಾರಿದ್ದು, ಹಳಿಯ ಮೇಲೆ ಬಿದ್ದು ಗಾಯಗೊಂಡಿದ್ದಾರೆ. ವ್ಯಕ್ತಿ ಕತ್ತಲಲ್ಲಿ ದೂರಕ್ಕೆ ಓಡಿ ಪರಾರಿಯಾಗಿದ್ದ. ಗಾಯಗೊಂಡ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ದೂರಿನಂತೆ, 40 ಸಾವಿರ ರೂ. ನಗದು ಮತ್ತು ಚಿನ್ನಾಭರಣ ಸೇರಿ ಒಟ್ಟು 8 ಲಕ್ಷ ಮೌಲ್ಯದ ಸೊತ್ತು ಕಳವುಗೈದ ಬಗ್ಗೆ ಮಂಗಳೂರು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Robbery in mangalore bangalore train, Vanity bag and gold ornaments worth lakhs stolen near Puttur
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm