ಬ್ರೇಕಿಂಗ್ ನ್ಯೂಸ್
30-08-22 06:06 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 30: ಬೆಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗನ್ನು ಕಳವುಗೈದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಸೋಮವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ ರೈಲು ಮಧ್ಯರಾತ್ರಿ 2.30ರ ಸುಮಾರಿಗೆ ಪುತ್ತೂರು ರೈಲು ನಿಲ್ದಾಣಕ್ಕೆ ತಲುಪಿತ್ತು. ರೈಲು ಇನ್ನೇನು ಹೊರಡಿ ಸ್ವಲ್ಪ ಮುಂದೆ ಸಾಗುವಷ್ಟರಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಕೈಯಲ್ಲಿದ್ದ ವ್ಯಾನಿಟಿ ಬ್ಯಾಗನ್ನು ಕಿತ್ತುಕೊಂಡು ಓಡಿದ್ದಾನೆ.
ಬೆಂಗಳೂರಿನಲ್ಲಿ ವಾಸವಿರುವ ಕಾರವಾರ ಮೂಲದ ಶಿಕ್ಷಕ ದಂಪತಿ ರಮೇಶ್ ಮತ್ತು ನಿರ್ಮಲಾ ಚಿನ್ನಾಭರಣ ಕಳಕೊಂಡವರು. ನಿರ್ಮಲಾ ಅವರು ತಾನು ಮಲಗಿದ್ದ ತಲೆದಿಂಬಿನ ಅಡಿಯಲ್ಲಿ ಬ್ಯಾಗನ್ನು ಇರಿಸಿಕೊಂಡಿದ್ದರು. ಇದನ್ನು ಮೊದಲೇ ಗಮನಿಸಿದ್ದ ವ್ಯಕ್ತಿಯೊಬ್ಬ ವ್ಯಾನಿಟಿ ಬ್ಯಾಗನ್ನು ಹಿಡಿದೆಳೆದಿದ್ದಾನೆ. ಇಷ್ಟರಲ್ಲಿ ರೈಲು ಪುತ್ತೂರು – ಹಾರಾಡಿ ಬ್ರಿಡ್ಜ್ ದಾಟಿ ಮುಂದೆ ಸಿಟಿ ಗುಡ್ಡೆ ತಲುಪಿತ್ತು. ಮಹಿಳೆ ಗಾಬರಿಗೊಂಡು ಆತನನ್ನು ಬೆನ್ನತ್ತಿದ್ದು ಆಗಂತುಕ ರೈಲಿನಿಂದ ಹೊರಕ್ಕೆ ಹಾರಲು ಯತ್ನಿಸಿದ್ದಾನೆ. ಇದೇ ವೇಳೆ, ಮಹಿಳೆ ಬೊಬ್ಬೆ ಹೊಡೆಯುತ್ತಾ ರೈಲಿನ ಚೈನ್ ಎಳೆದಿದ್ದಾರೆ.
ರೈಲು ನಿಧಾನವಾಗುತ್ತಲೇ ವ್ಯಕ್ತಿ ಹೊರಕ್ಕೆ ಹಾರಿದ್ದು, ಕತ್ತಲೆಯಲ್ಲಿ ಪರಾರಿಯಾಗಿದ್ದಾನೆ. ಇದೇ ಮಹಿಳೆಯೂ ಆತನ ಜೊತೆಗೆ ರೈಲಿನಿಂದ ಹಾರಿದ್ದು, ಹಳಿಯ ಮೇಲೆ ಬಿದ್ದು ಗಾಯಗೊಂಡಿದ್ದಾರೆ. ವ್ಯಕ್ತಿ ಕತ್ತಲಲ್ಲಿ ದೂರಕ್ಕೆ ಓಡಿ ಪರಾರಿಯಾಗಿದ್ದ. ಗಾಯಗೊಂಡ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ದೂರಿನಂತೆ, 40 ಸಾವಿರ ರೂ. ನಗದು ಮತ್ತು ಚಿನ್ನಾಭರಣ ಸೇರಿ ಒಟ್ಟು 8 ಲಕ್ಷ ಮೌಲ್ಯದ ಸೊತ್ತು ಕಳವುಗೈದ ಬಗ್ಗೆ ಮಂಗಳೂರು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Robbery in mangalore bangalore train, Vanity bag and gold ornaments worth lakhs stolen near Puttur
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 11:32 am
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm