ಬ್ರೇಕಿಂಗ್ ನ್ಯೂಸ್
06-10-20 08:34 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 6: 22 ವರ್ಷದ ನೇಪಾಳಿ ಯುವತಿಯೊಬ್ಬಳು ಅತ್ಯಾಚಾರ ಆರೋಪಿಯ ವಿರುದ್ಧ ಕೇಸ್ ದಾಖಲಿಸಲು ಲಕ್ನೋದಿಂದ 800 ಕಿಮೀ ದೂರದ ನಾಗ್ಪುರಕ್ಕೆ ಪ್ರಯಾಣಿಸಿರುವ ಘಟನೆ ನಡೆದಿದೆ.
ಸಂತ್ರಸ್ತೆ ಯುವತಿ, ಆರೋಪಿಗೆ ಹೆದರಿ ಲಕ್ನೋದಿಂದ 800 ಕಿ.ಮೀ. ದೂರ ಪ್ರಯಾಣಿಸಿ ನಾಗ್ಪುರದ ಕೊರಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಯುವತಿ, ಉದ್ಯೋಗಕ್ಕಾಗಿ 2018ರಲ್ಲಿ ನೇಪಾಳದಿಂದ ಭಾರತಕ್ಕೆ ಬಂದಿದ್ದಳು. ಕಳೆದ ಮಾರ್ಚ್ ವರೆಗೂ ಲಕ್ನೋದ ಫೈಜಾಬಾದ್ ರಸ್ತೆಯಲ್ಲಿರುವ ಬಾಡಿಗೆ ಫ್ಲ್ಯಾಟ್ನಲ್ಲಿ ಸ್ನೇಹಿತೆಯ ಜೊತೆಗಿದ್ದಳು. ಸ್ನೇಹಿತೆ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಲಕ್ನೋ ಮೂಲದ ಆರೋಪಿ ಪ್ರವೀಣ್ ಯಾದವ್ನನ್ನು ವಿಡಿಯೋ ಕಾಲ್ ಮೂಲಕ ಪರಿಚಯಿಸಿದ್ದಳು.
ಈ ನಡುವೆ, ಗೆಳತಿ ಮತ್ತು ಸಂತ್ರಸ್ತ ಯುವತಿ ಜೊತೆ ಹಣದ ವಿಚಾರದಲ್ಲಿ ಜಗಳವಾಗಿತ್ತು. ಈ ಬಗ್ಗೆ ಯುವತಿ, ಪ್ರವೀಣ್ ಯಾದವ್ಗೆ ದೂರು ನೀಡಿದ್ದಳು. ಒಂದೆರಡು ದಿನಗಳ ನಂತರ ಆರೋಪಿ ದುಬೈನಿಂದ ಲಕ್ನೋಗೆ ಬಂದಿದ್ದಾನೆ. ನಂತರ ಹೋಟೆಲ್ವೊಂದರಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿದ್ದು ಈ ವೇಳೆ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದು, ನಂತರ ಸಂತ್ರಸ್ತೆಯನ್ನು ಬ್ಲಾಕ್ ಮೇಲ್ ಮಾಡಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಗ ಸಂತ್ರಸ್ತ ಯುವತಿ ಲಕ್ನೋದಿಂದ ತಪ್ಪಿಸಿಕೊಂಡು, ನಾಗ್ಪುರದಲ್ಲಿರುವ ನೇಪಾಳದ ಸ್ನೇಹಿತನೊಬ್ಬನ ಮನೆಗೆ ಬಂದಿದ್ದಾಳೆ. ಇಲ್ಲಿ ಕೊರಡಿ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಯಾದವ್ ಮತ್ತು ಲಕ್ನೋ ಮೂಲದ ಸ್ನೇಹಿತೆಯ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣವನ್ನು ಲಕ್ನೋ ಠಾಣೆಗೆ ವರ್ಗಾಯಿಸಲಿದ್ದಾರೆ.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 09:16 pm
Mangalore Correspondent
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm