ಬ್ರೇಕಿಂಗ್ ನ್ಯೂಸ್
06-10-20 08:34 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 6: 22 ವರ್ಷದ ನೇಪಾಳಿ ಯುವತಿಯೊಬ್ಬಳು ಅತ್ಯಾಚಾರ ಆರೋಪಿಯ ವಿರುದ್ಧ ಕೇಸ್ ದಾಖಲಿಸಲು ಲಕ್ನೋದಿಂದ 800 ಕಿಮೀ ದೂರದ ನಾಗ್ಪುರಕ್ಕೆ ಪ್ರಯಾಣಿಸಿರುವ ಘಟನೆ ನಡೆದಿದೆ.
ಸಂತ್ರಸ್ತೆ ಯುವತಿ, ಆರೋಪಿಗೆ ಹೆದರಿ ಲಕ್ನೋದಿಂದ 800 ಕಿ.ಮೀ. ದೂರ ಪ್ರಯಾಣಿಸಿ ನಾಗ್ಪುರದ ಕೊರಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಯುವತಿ, ಉದ್ಯೋಗಕ್ಕಾಗಿ 2018ರಲ್ಲಿ ನೇಪಾಳದಿಂದ ಭಾರತಕ್ಕೆ ಬಂದಿದ್ದಳು. ಕಳೆದ ಮಾರ್ಚ್ ವರೆಗೂ ಲಕ್ನೋದ ಫೈಜಾಬಾದ್ ರಸ್ತೆಯಲ್ಲಿರುವ ಬಾಡಿಗೆ ಫ್ಲ್ಯಾಟ್ನಲ್ಲಿ ಸ್ನೇಹಿತೆಯ ಜೊತೆಗಿದ್ದಳು. ಸ್ನೇಹಿತೆ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಲಕ್ನೋ ಮೂಲದ ಆರೋಪಿ ಪ್ರವೀಣ್ ಯಾದವ್ನನ್ನು ವಿಡಿಯೋ ಕಾಲ್ ಮೂಲಕ ಪರಿಚಯಿಸಿದ್ದಳು.
ಈ ನಡುವೆ, ಗೆಳತಿ ಮತ್ತು ಸಂತ್ರಸ್ತ ಯುವತಿ ಜೊತೆ ಹಣದ ವಿಚಾರದಲ್ಲಿ ಜಗಳವಾಗಿತ್ತು. ಈ ಬಗ್ಗೆ ಯುವತಿ, ಪ್ರವೀಣ್ ಯಾದವ್ಗೆ ದೂರು ನೀಡಿದ್ದಳು. ಒಂದೆರಡು ದಿನಗಳ ನಂತರ ಆರೋಪಿ ದುಬೈನಿಂದ ಲಕ್ನೋಗೆ ಬಂದಿದ್ದಾನೆ. ನಂತರ ಹೋಟೆಲ್ವೊಂದರಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿದ್ದು ಈ ವೇಳೆ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದು, ನಂತರ ಸಂತ್ರಸ್ತೆಯನ್ನು ಬ್ಲಾಕ್ ಮೇಲ್ ಮಾಡಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಗ ಸಂತ್ರಸ್ತ ಯುವತಿ ಲಕ್ನೋದಿಂದ ತಪ್ಪಿಸಿಕೊಂಡು, ನಾಗ್ಪುರದಲ್ಲಿರುವ ನೇಪಾಳದ ಸ್ನೇಹಿತನೊಬ್ಬನ ಮನೆಗೆ ಬಂದಿದ್ದಾಳೆ. ಇಲ್ಲಿ ಕೊರಡಿ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಯಾದವ್ ಮತ್ತು ಲಕ್ನೋ ಮೂಲದ ಸ್ನೇಹಿತೆಯ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣವನ್ನು ಲಕ್ನೋ ಠಾಣೆಗೆ ವರ್ಗಾಯಿಸಲಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm