ಬ್ರೇಕಿಂಗ್ ನ್ಯೂಸ್
06-10-20 08:34 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 6: 22 ವರ್ಷದ ನೇಪಾಳಿ ಯುವತಿಯೊಬ್ಬಳು ಅತ್ಯಾಚಾರ ಆರೋಪಿಯ ವಿರುದ್ಧ ಕೇಸ್ ದಾಖಲಿಸಲು ಲಕ್ನೋದಿಂದ 800 ಕಿಮೀ ದೂರದ ನಾಗ್ಪುರಕ್ಕೆ ಪ್ರಯಾಣಿಸಿರುವ ಘಟನೆ ನಡೆದಿದೆ.
ಸಂತ್ರಸ್ತೆ ಯುವತಿ, ಆರೋಪಿಗೆ ಹೆದರಿ ಲಕ್ನೋದಿಂದ 800 ಕಿ.ಮೀ. ದೂರ ಪ್ರಯಾಣಿಸಿ ನಾಗ್ಪುರದ ಕೊರಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಯುವತಿ, ಉದ್ಯೋಗಕ್ಕಾಗಿ 2018ರಲ್ಲಿ ನೇಪಾಳದಿಂದ ಭಾರತಕ್ಕೆ ಬಂದಿದ್ದಳು. ಕಳೆದ ಮಾರ್ಚ್ ವರೆಗೂ ಲಕ್ನೋದ ಫೈಜಾಬಾದ್ ರಸ್ತೆಯಲ್ಲಿರುವ ಬಾಡಿಗೆ ಫ್ಲ್ಯಾಟ್ನಲ್ಲಿ ಸ್ನೇಹಿತೆಯ ಜೊತೆಗಿದ್ದಳು. ಸ್ನೇಹಿತೆ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಲಕ್ನೋ ಮೂಲದ ಆರೋಪಿ ಪ್ರವೀಣ್ ಯಾದವ್ನನ್ನು ವಿಡಿಯೋ ಕಾಲ್ ಮೂಲಕ ಪರಿಚಯಿಸಿದ್ದಳು.
ಈ ನಡುವೆ, ಗೆಳತಿ ಮತ್ತು ಸಂತ್ರಸ್ತ ಯುವತಿ ಜೊತೆ ಹಣದ ವಿಚಾರದಲ್ಲಿ ಜಗಳವಾಗಿತ್ತು. ಈ ಬಗ್ಗೆ ಯುವತಿ, ಪ್ರವೀಣ್ ಯಾದವ್ಗೆ ದೂರು ನೀಡಿದ್ದಳು. ಒಂದೆರಡು ದಿನಗಳ ನಂತರ ಆರೋಪಿ ದುಬೈನಿಂದ ಲಕ್ನೋಗೆ ಬಂದಿದ್ದಾನೆ. ನಂತರ ಹೋಟೆಲ್ವೊಂದರಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿದ್ದು ಈ ವೇಳೆ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದು, ನಂತರ ಸಂತ್ರಸ್ತೆಯನ್ನು ಬ್ಲಾಕ್ ಮೇಲ್ ಮಾಡಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಗ ಸಂತ್ರಸ್ತ ಯುವತಿ ಲಕ್ನೋದಿಂದ ತಪ್ಪಿಸಿಕೊಂಡು, ನಾಗ್ಪುರದಲ್ಲಿರುವ ನೇಪಾಳದ ಸ್ನೇಹಿತನೊಬ್ಬನ ಮನೆಗೆ ಬಂದಿದ್ದಾಳೆ. ಇಲ್ಲಿ ಕೊರಡಿ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಯಾದವ್ ಮತ್ತು ಲಕ್ನೋ ಮೂಲದ ಸ್ನೇಹಿತೆಯ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣವನ್ನು ಲಕ್ನೋ ಠಾಣೆಗೆ ವರ್ಗಾಯಿಸಲಿದ್ದಾರೆ.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:37 pm
Mangalore Correspondent
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm