ಬ್ರೇಕಿಂಗ್ ನ್ಯೂಸ್
06-10-20 08:34 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 6: 22 ವರ್ಷದ ನೇಪಾಳಿ ಯುವತಿಯೊಬ್ಬಳು ಅತ್ಯಾಚಾರ ಆರೋಪಿಯ ವಿರುದ್ಧ ಕೇಸ್ ದಾಖಲಿಸಲು ಲಕ್ನೋದಿಂದ 800 ಕಿಮೀ ದೂರದ ನಾಗ್ಪುರಕ್ಕೆ ಪ್ರಯಾಣಿಸಿರುವ ಘಟನೆ ನಡೆದಿದೆ.
ಸಂತ್ರಸ್ತೆ ಯುವತಿ, ಆರೋಪಿಗೆ ಹೆದರಿ ಲಕ್ನೋದಿಂದ 800 ಕಿ.ಮೀ. ದೂರ ಪ್ರಯಾಣಿಸಿ ನಾಗ್ಪುರದ ಕೊರಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಯುವತಿ, ಉದ್ಯೋಗಕ್ಕಾಗಿ 2018ರಲ್ಲಿ ನೇಪಾಳದಿಂದ ಭಾರತಕ್ಕೆ ಬಂದಿದ್ದಳು. ಕಳೆದ ಮಾರ್ಚ್ ವರೆಗೂ ಲಕ್ನೋದ ಫೈಜಾಬಾದ್ ರಸ್ತೆಯಲ್ಲಿರುವ ಬಾಡಿಗೆ ಫ್ಲ್ಯಾಟ್ನಲ್ಲಿ ಸ್ನೇಹಿತೆಯ ಜೊತೆಗಿದ್ದಳು. ಸ್ನೇಹಿತೆ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಲಕ್ನೋ ಮೂಲದ ಆರೋಪಿ ಪ್ರವೀಣ್ ಯಾದವ್ನನ್ನು ವಿಡಿಯೋ ಕಾಲ್ ಮೂಲಕ ಪರಿಚಯಿಸಿದ್ದಳು.
ಈ ನಡುವೆ, ಗೆಳತಿ ಮತ್ತು ಸಂತ್ರಸ್ತ ಯುವತಿ ಜೊತೆ ಹಣದ ವಿಚಾರದಲ್ಲಿ ಜಗಳವಾಗಿತ್ತು. ಈ ಬಗ್ಗೆ ಯುವತಿ, ಪ್ರವೀಣ್ ಯಾದವ್ಗೆ ದೂರು ನೀಡಿದ್ದಳು. ಒಂದೆರಡು ದಿನಗಳ ನಂತರ ಆರೋಪಿ ದುಬೈನಿಂದ ಲಕ್ನೋಗೆ ಬಂದಿದ್ದಾನೆ. ನಂತರ ಹೋಟೆಲ್ವೊಂದರಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿದ್ದು ಈ ವೇಳೆ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದು, ನಂತರ ಸಂತ್ರಸ್ತೆಯನ್ನು ಬ್ಲಾಕ್ ಮೇಲ್ ಮಾಡಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಗ ಸಂತ್ರಸ್ತ ಯುವತಿ ಲಕ್ನೋದಿಂದ ತಪ್ಪಿಸಿಕೊಂಡು, ನಾಗ್ಪುರದಲ್ಲಿರುವ ನೇಪಾಳದ ಸ್ನೇಹಿತನೊಬ್ಬನ ಮನೆಗೆ ಬಂದಿದ್ದಾಳೆ. ಇಲ್ಲಿ ಕೊರಡಿ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಯಾದವ್ ಮತ್ತು ಲಕ್ನೋ ಮೂಲದ ಸ್ನೇಹಿತೆಯ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣವನ್ನು ಲಕ್ನೋ ಠಾಣೆಗೆ ವರ್ಗಾಯಿಸಲಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm