ಬ್ರೇಕಿಂಗ್ ನ್ಯೂಸ್
06-10-20 08:34 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 6: 22 ವರ್ಷದ ನೇಪಾಳಿ ಯುವತಿಯೊಬ್ಬಳು ಅತ್ಯಾಚಾರ ಆರೋಪಿಯ ವಿರುದ್ಧ ಕೇಸ್ ದಾಖಲಿಸಲು ಲಕ್ನೋದಿಂದ 800 ಕಿಮೀ ದೂರದ ನಾಗ್ಪುರಕ್ಕೆ ಪ್ರಯಾಣಿಸಿರುವ ಘಟನೆ ನಡೆದಿದೆ.
ಸಂತ್ರಸ್ತೆ ಯುವತಿ, ಆರೋಪಿಗೆ ಹೆದರಿ ಲಕ್ನೋದಿಂದ 800 ಕಿ.ಮೀ. ದೂರ ಪ್ರಯಾಣಿಸಿ ನಾಗ್ಪುರದ ಕೊರಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಯುವತಿ, ಉದ್ಯೋಗಕ್ಕಾಗಿ 2018ರಲ್ಲಿ ನೇಪಾಳದಿಂದ ಭಾರತಕ್ಕೆ ಬಂದಿದ್ದಳು. ಕಳೆದ ಮಾರ್ಚ್ ವರೆಗೂ ಲಕ್ನೋದ ಫೈಜಾಬಾದ್ ರಸ್ತೆಯಲ್ಲಿರುವ ಬಾಡಿಗೆ ಫ್ಲ್ಯಾಟ್ನಲ್ಲಿ ಸ್ನೇಹಿತೆಯ ಜೊತೆಗಿದ್ದಳು. ಸ್ನೇಹಿತೆ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಲಕ್ನೋ ಮೂಲದ ಆರೋಪಿ ಪ್ರವೀಣ್ ಯಾದವ್ನನ್ನು ವಿಡಿಯೋ ಕಾಲ್ ಮೂಲಕ ಪರಿಚಯಿಸಿದ್ದಳು.
ಈ ನಡುವೆ, ಗೆಳತಿ ಮತ್ತು ಸಂತ್ರಸ್ತ ಯುವತಿ ಜೊತೆ ಹಣದ ವಿಚಾರದಲ್ಲಿ ಜಗಳವಾಗಿತ್ತು. ಈ ಬಗ್ಗೆ ಯುವತಿ, ಪ್ರವೀಣ್ ಯಾದವ್ಗೆ ದೂರು ನೀಡಿದ್ದಳು. ಒಂದೆರಡು ದಿನಗಳ ನಂತರ ಆರೋಪಿ ದುಬೈನಿಂದ ಲಕ್ನೋಗೆ ಬಂದಿದ್ದಾನೆ. ನಂತರ ಹೋಟೆಲ್ವೊಂದರಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿದ್ದು ಈ ವೇಳೆ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದು, ನಂತರ ಸಂತ್ರಸ್ತೆಯನ್ನು ಬ್ಲಾಕ್ ಮೇಲ್ ಮಾಡಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಗ ಸಂತ್ರಸ್ತ ಯುವತಿ ಲಕ್ನೋದಿಂದ ತಪ್ಪಿಸಿಕೊಂಡು, ನಾಗ್ಪುರದಲ್ಲಿರುವ ನೇಪಾಳದ ಸ್ನೇಹಿತನೊಬ್ಬನ ಮನೆಗೆ ಬಂದಿದ್ದಾಳೆ. ಇಲ್ಲಿ ಕೊರಡಿ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಯಾದವ್ ಮತ್ತು ಲಕ್ನೋ ಮೂಲದ ಸ್ನೇಹಿತೆಯ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣವನ್ನು ಲಕ್ನೋ ಠಾಣೆಗೆ ವರ್ಗಾಯಿಸಲಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm