ಬ್ರೇಕಿಂಗ್ ನ್ಯೂಸ್
02-09-22 01:17 pm HK News Desk ಕ್ರೈಂ
ಕಾಸರಗೋಡು, ಸೆ.2 : ರೈಲು ಹಳಿಯಲ್ಲಿ ಕಾಂಕ್ರೀಟ್ ತುಂಡುಗಳನ್ನಿಟ್ಟ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಮೂಲದ ಮಹಿಳೆಯನ್ನು ರೈಲ್ವೆ ಭದ್ರತಾಪಡೆ ಹಾಗೂ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ವಿಲ್ಲುಪುರ ಮೂಲದ ಕನಕವಳ್ಳಿ ಬಂಧಿತೆ.
ಈಕೆ ಗುಜರಿ ಹೆಕ್ಕುವ ಕಾಯಕ ನಡೆಸುತ್ತಿದ್ದು, ಸಿಮೆಂಟ್ ಒಳಗೊಂಡ ಕಬ್ಬಿಣದ ಸರಳಿನಿಂದ ಸಿಮೆಂಟ್ ಬೇರ್ಪಡಿಸುವ ಉದ್ದೇಶದಿಂದ ರೈಲು ಹಳಿಯಲ್ಲಿ ಇಟ್ಟಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಂಗಳವಾರ ಸಂಜೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈಕೆಯನ್ನು ಗಮನಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ನಡೆಸಿರುವುದನ್ನು ಒಪ್ಪಿಕೊಂಡಿದ್ದಾಳೆ.
ಆ.21ರಂದು ಕಾಸರಗೋಡು -ಕಾಞಂಗಾಡ್ ಮಧ್ಯೆ ಹಾದುಹೋಗುವ ಹಳಿಗಳಲ್ಲಿ ಕೋಟಿಕುಳಂ- ಬೇಕಲ ನಡುವೆ ಈ ದುಷ್ಕೃತ್ಯ ನಡೆಸಲಾಗಿತ್ತು. ರೈಲ್ವೆ ಹಳಿಗಳ ಮೇಲೆ ಕಬ್ಬಿಣದ ಸರಳುಗಳು, ಬೀಮ್ ಕಂಡುಬಂದಿತ್ತು. ಇದು ಭಾರೀ ಆತಂಕಕ್ಕೂ ಕಾರಣವಾಗಿತ್ತು.
ಆಕೆಯ ವಿರುದ್ಧ ಗಂಭೀರ ಆರೋಪ ಹೊರಿಸಿದ್ದರೂ, ಆಕೆಗೆ ಕನಿಷ್ಠ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆಯಾಗಬಹುದು, ಕನಕವಲ್ಲಿ ಅವರ ಉದ್ದೇಶಗಳು ದುರುದ್ದೇಶದಿಂದ ಕೂಡಿರಲಿಲ್ಲ ಎಂದು ಪೊಲೀಸರು ಹೇಳುತ್ತಾರೆ. ಇದು ವಿಧ್ವಂಸಕ ಯತ್ನವಲ್ಲ, ಆದರೆ ಕನಕವಲ್ಲಿ ಅವರು ಮುಗ್ಧ ಮನಸ್ಸಿನಿಂದ ವೇಗವಾಗಿ ಬರುವ ರೈಲನ್ನು ಬಳಸಿ ಲೋಹದ ತುಂಡನ್ನು ಕತ್ತರಿಸಲು ಪ್ರಯತ್ನಿಸಿದರು ಎಂದು ಬೇಕಲ ಠಾಣಾಧಿಕಾರಿ ವಿಪಿನ್ ಯು ಪಿ ಹೇಳಿದ್ದಾರೆ.
ಕೇವಲ 2ನೇ ತರಗತಿ ವರೆಗೆ ಓದಿರುವ ಕನಕವಲ್ಲಿ, ಐದು ವರ್ಷದ ಬಾಲಕನ ತಾಯಿಯಾಗಿದ್ದು, ಗುಜರಿ ಹೆಕ್ಕುವ ಕೆಲಸ ಮಾಡುತ್ತಿದ್ದಾರೆ. ಕಾಂಕ್ರೀಟ್ ಬೇಸ್ ಕತ್ತರಿಸಿ 1,000 ರೂಪಾಯಿ ಮೌಲ್ಯದ ಲೋಹದ ತುಂಡನ್ನು ಮನೆಗೆ ತೆಗೆದುಕೊಂಡು ಹೋಗುವುದು ಅವಳ ಮನಸ್ಸಿನಲ್ಲಿತ್ತು ಎನ್ನಲಾಗಿದೆ.
Kasaragod police arrested a 22-year-old woman from Tamil Nadu's Kallakurichi district for trying to wreck a train by placing a steel bar with a heavy concrete base on the railway track.Despite the grave charge pressed against her, which may get her at least three years of rigorous imprisonment, police say Kanakavalli's intentions were not malicious.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 02:47 pm
Mangalore Correspondent
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm