ಬ್ರೇಕಿಂಗ್ ನ್ಯೂಸ್
03-09-22 01:58 pm HK News Desk ಕ್ರೈಂ
ಮೈಸೂರು, ಸೆ.3: ಆಕೆ ಬಿಸಿಎ ವಿದ್ಯಾರ್ಥಿನಿ, 15 ದಿನ ಕಳೆದಿದ್ರೆ ಪದವಿ ಮುಗಿಸಿ ಎಲ್ಲಾದ್ರೂ ಕೆಲಸಕ್ಕೆ ಸೇರುತ್ತಿದ್ದಳು. ಆದ್ರೆ ವಿಧಿಯಾಟವೇ ಬೇರೆಯಾಗಿತ್ತು. ಸ್ನೇಹಿತನ ಜೊತೆ ಲಾಡ್ಜ್ಗೆ ಬಂದಿದ್ದ ವಿದ್ಯಾರ್ಥಿನಿ ಅಲ್ಲಿಯೇ ಹೆಣವಾಗಿದ್ದಾಳೆ. ಯುವತಿ ಸಾವಿನ ಸುತ್ತ ಅನುಮಾನ ಹುಟ್ಟುಕೊಂಡಿದ್ದು ಕೊಲೆಯೋ ಆತ್ಮಹತ್ಯೆಯೋ ಅನ್ನುವ ಶಂಕೆ ಉಂಟಾಗಿದೆ.
ಪಿರಿಯಾಪಟ್ಟಣ ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ರವಿ ಅವರ ಪುತ್ರಿ ಅಪೂರ್ವ ಶೆಟ್ಟಿ (21) ಗುರುವಾರ ರಾತ್ರಿ ಲಾಡ್ಜ್ ಒಂದರಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. 15 ದಿನಗಳಲ್ಲಿ ಪದವಿ ಮುಗಿಸಿ ಊರಿಗೆ ಹೋಗೋದ್ರಲ್ಲಿದ್ದಳು, ದುರದೃಷ್ಟವಶಾತ್ ಆಕೆ ಸಾವನ್ನಪ್ಪಿದ್ದಾಳೆ.
ಅಪೂರ್ವ ಕಳೆದ ಕೆಲವು ವರ್ಷಗಳಿಂದ ಆಶಿಕ್ ಎಂಬ ಯುವಕನೊಂದಿಗೆ ಪ್ರೀತಿ ನೆಪದಲ್ಲಿ ಓಡಾಡುತ್ತಿದ್ದಳು. ಎರಡು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರು ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಆಶಿಕ್ ಜೊತೆಗೆ ಬಂದು ರೂಂ ಪಡೆದು ವಾಸ್ತವ್ಯ ಹೂಡಿದ್ದರು. ರೂಮಲ್ಲಿದ್ದರೂ ಆಶಿಕ್ ಆಗಾಗ್ಗೆ ಹೊರಗೆ ಹೋಗಿ ಮತ್ತೆ ಹೋಟೆಲ್ಗೆ ವಾಪಸ್ ಬರುತ್ತಿದ್ದ. ಗುರುವಾರ ಬೆಳಗ್ಗೆ ಹೋಟೆಲ್ ನಿಂದ ಹೊರಟಿದ್ದ ಆಶಿಕ್ ಮತ್ತೆ ವಾಪಸ್ ಬಂದಿರಲಿಲ್ಲ. ಹುಡುಗಿ ಮಾತ್ರ ಹೋಟೆಲ್ನಿಂದ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ರೂಂನಲ್ಲಿದ್ದ ಫೋನಿಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದೇ ಇದ್ದಾಗ ಆತಂಕಗೊಂಡು ತಕ್ಷಣ ದೇವರಾಜ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇವರಾಜ ಠಾಣೆ ಪೊಲೀಸರು ಬಂದು ರೂಂ ತೆರೆದು ನೋಡಿದಾಗ ಅಪೂರ್ವ ರೂಂನಲ್ಲಿ ಹೆಣವಾಗಿ ಬಿದ್ದಿದ್ದಾಳೆ.
ಅಪೂರ್ವ ಸ್ನೇಹಿತರ ಮಾಹಿತಿ ಪ್ರಕಾರ ಆಶಿಕ್ ಮತ್ತು ಅಪೂರ್ವ ಶೆಟ್ಟಿ ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಒಂದೂವರೆ ವರ್ಷದ ಹಿಂದೆ ಮನೆಯವರಿಗೆ ಇವರ ವಿಚಾರ ತಿಳಿದು ಜಗಳವಾಗಿತ್ತು. ಇಬ್ಬರಿಗೂ ಬುದ್ಧಿಮಾತು ಹೇಳಿ ದೂರ ಆಗುವಂತೆ ಹೇಳಿದ್ದರು. ಇದಾದ ಬಳಿಕವೂ ಆಕೆ ಅದೇ ಹುಡುಗನ ಜೊತೆ ಸ್ನೇಹ ಮುಂದುವರಿಸಿದ್ದಾಳೆ. ಆಗಾಗ ಆತನ ಜೊತೆ ಸುತ್ತಾಡುತ್ತಿದ್ದಳು ಎಂದು ತಿಳಿದು ಬಂದಿರುವುದಾಗಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.
ಯುವಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೂಮಲ್ಲಿ ಜಗಳ ನಡೆದು ಆತನೇ ಕೊಲೆ ನಡೆಸಿದ್ದಾನೆಯೇ ಎಂಬ ಶಂಕೆಯು ಇದೆ. ಆತ್ಮಹತ್ಯೆ ಬಗ್ಗೆಯೂ ಅನುಮಾನಗಳಿವೆ.
Couple book lodge in Mysuru girl found dead boy arrested.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm