ಬ್ರೇಕಿಂಗ್ ನ್ಯೂಸ್
03-09-22 01:58 pm HK News Desk ಕ್ರೈಂ
ಮೈಸೂರು, ಸೆ.3: ಆಕೆ ಬಿಸಿಎ ವಿದ್ಯಾರ್ಥಿನಿ, 15 ದಿನ ಕಳೆದಿದ್ರೆ ಪದವಿ ಮುಗಿಸಿ ಎಲ್ಲಾದ್ರೂ ಕೆಲಸಕ್ಕೆ ಸೇರುತ್ತಿದ್ದಳು. ಆದ್ರೆ ವಿಧಿಯಾಟವೇ ಬೇರೆಯಾಗಿತ್ತು. ಸ್ನೇಹಿತನ ಜೊತೆ ಲಾಡ್ಜ್ಗೆ ಬಂದಿದ್ದ ವಿದ್ಯಾರ್ಥಿನಿ ಅಲ್ಲಿಯೇ ಹೆಣವಾಗಿದ್ದಾಳೆ. ಯುವತಿ ಸಾವಿನ ಸುತ್ತ ಅನುಮಾನ ಹುಟ್ಟುಕೊಂಡಿದ್ದು ಕೊಲೆಯೋ ಆತ್ಮಹತ್ಯೆಯೋ ಅನ್ನುವ ಶಂಕೆ ಉಂಟಾಗಿದೆ.
ಪಿರಿಯಾಪಟ್ಟಣ ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ರವಿ ಅವರ ಪುತ್ರಿ ಅಪೂರ್ವ ಶೆಟ್ಟಿ (21) ಗುರುವಾರ ರಾತ್ರಿ ಲಾಡ್ಜ್ ಒಂದರಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. 15 ದಿನಗಳಲ್ಲಿ ಪದವಿ ಮುಗಿಸಿ ಊರಿಗೆ ಹೋಗೋದ್ರಲ್ಲಿದ್ದಳು, ದುರದೃಷ್ಟವಶಾತ್ ಆಕೆ ಸಾವನ್ನಪ್ಪಿದ್ದಾಳೆ.
ಅಪೂರ್ವ ಕಳೆದ ಕೆಲವು ವರ್ಷಗಳಿಂದ ಆಶಿಕ್ ಎಂಬ ಯುವಕನೊಂದಿಗೆ ಪ್ರೀತಿ ನೆಪದಲ್ಲಿ ಓಡಾಡುತ್ತಿದ್ದಳು. ಎರಡು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರು ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಆಶಿಕ್ ಜೊತೆಗೆ ಬಂದು ರೂಂ ಪಡೆದು ವಾಸ್ತವ್ಯ ಹೂಡಿದ್ದರು. ರೂಮಲ್ಲಿದ್ದರೂ ಆಶಿಕ್ ಆಗಾಗ್ಗೆ ಹೊರಗೆ ಹೋಗಿ ಮತ್ತೆ ಹೋಟೆಲ್ಗೆ ವಾಪಸ್ ಬರುತ್ತಿದ್ದ. ಗುರುವಾರ ಬೆಳಗ್ಗೆ ಹೋಟೆಲ್ ನಿಂದ ಹೊರಟಿದ್ದ ಆಶಿಕ್ ಮತ್ತೆ ವಾಪಸ್ ಬಂದಿರಲಿಲ್ಲ. ಹುಡುಗಿ ಮಾತ್ರ ಹೋಟೆಲ್ನಿಂದ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ರೂಂನಲ್ಲಿದ್ದ ಫೋನಿಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದೇ ಇದ್ದಾಗ ಆತಂಕಗೊಂಡು ತಕ್ಷಣ ದೇವರಾಜ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇವರಾಜ ಠಾಣೆ ಪೊಲೀಸರು ಬಂದು ರೂಂ ತೆರೆದು ನೋಡಿದಾಗ ಅಪೂರ್ವ ರೂಂನಲ್ಲಿ ಹೆಣವಾಗಿ ಬಿದ್ದಿದ್ದಾಳೆ.
ಅಪೂರ್ವ ಸ್ನೇಹಿತರ ಮಾಹಿತಿ ಪ್ರಕಾರ ಆಶಿಕ್ ಮತ್ತು ಅಪೂರ್ವ ಶೆಟ್ಟಿ ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಒಂದೂವರೆ ವರ್ಷದ ಹಿಂದೆ ಮನೆಯವರಿಗೆ ಇವರ ವಿಚಾರ ತಿಳಿದು ಜಗಳವಾಗಿತ್ತು. ಇಬ್ಬರಿಗೂ ಬುದ್ಧಿಮಾತು ಹೇಳಿ ದೂರ ಆಗುವಂತೆ ಹೇಳಿದ್ದರು. ಇದಾದ ಬಳಿಕವೂ ಆಕೆ ಅದೇ ಹುಡುಗನ ಜೊತೆ ಸ್ನೇಹ ಮುಂದುವರಿಸಿದ್ದಾಳೆ. ಆಗಾಗ ಆತನ ಜೊತೆ ಸುತ್ತಾಡುತ್ತಿದ್ದಳು ಎಂದು ತಿಳಿದು ಬಂದಿರುವುದಾಗಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.
ಯುವಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೂಮಲ್ಲಿ ಜಗಳ ನಡೆದು ಆತನೇ ಕೊಲೆ ನಡೆಸಿದ್ದಾನೆಯೇ ಎಂಬ ಶಂಕೆಯು ಇದೆ. ಆತ್ಮಹತ್ಯೆ ಬಗ್ಗೆಯೂ ಅನುಮಾನಗಳಿವೆ.
Couple book lodge in Mysuru girl found dead boy arrested.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm