ಬ್ರೇಕಿಂಗ್ ನ್ಯೂಸ್
03-09-22 03:00 pm Bangalore Correspondent ಕ್ರೈಂ
ಬೆಂಗಳೂರು, ಸೆ.3 : ತನ್ನನ್ನು ತಾನು ಪ್ರೇಮಸಾಯಿ ದೇವಮಾನವನೆಂದು ಹೇಳಿಕೊಂಡಿದ್ದಲ್ಲದೆ, ಜನರ ಕಷ್ಟಗಳನ್ನು ನಿವಾರಿಸುತ್ತೇನೆಂದು ಹೇಳಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ವಂಚಿಸುತ್ತಿದ್ದ ಪ್ರಕರಣ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಕೊಲ್ಲಾಪುರದಿಂದ ಬಂದಿದ್ದ ತಂಡವೊಂದು ಪ್ರೇಮ ಸಾಯಿಬಾಬಾ ಎಂದು ಹೇಳಿಕೊಂಡು ವಂಚಿಸಿರುವ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ನಾಪತ್ತೆಯಾಗಿದ್ದಾರೆ. ಚನ್ನಪಟ್ಟಣ ನಗರದ ಎಂ.ಜಿ. ರಸ್ತೆಯ ಯಶೋದಮ್ಮ ಎಂಬವರ ಮನೆಯಲ್ಲಿ 8 ತಿಂಗಳಿಂದ ಸಚಿನ್ ಅಕಾರಾಂ ಸರ್ಗರ್ ಎಂಬಾತ ಉಳಿದುಕೊಂಡಿದ್ದಲ್ಲದೆ, ಜನರ ಸಮಸ್ಯೆ ಪರಿಹರಿಸುತ್ತೇನೆಂದು ಹೇಳಿ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪೂಜಾ ಕಾರ್ಯಗಳನ್ನು ಕೈಗೊಳ್ಳುತ್ತಿದ್ದ. ಸ್ಥಳೀಯರು ಆತ ನಡೆಸುತ್ತಿದ್ದ ಭಜನಾ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದರು. ಮಹಿಳೆಯರು, ವೃದ್ಧರು, ಪುರುಷರು ಕೂಡ ಸೇರುತ್ತಿದ್ದರು.
ಈ ನಡುವೆ, ಯಶೋದಮ್ಮನ ಮನೆ ಚಿಕ್ಕದಾಗಿದ್ದು ಭಜನಾ ಕಾರ್ಯಕ್ಕೆ ಜಾಗ ಸಾಲುತ್ತಿಲ್ಲ. ಪ್ರತಿ ಗುರುವಾರ ಭಜನೆಗೆ ನಿಮ್ಮ ತೋಟದ ಮನೆಯಲ್ಲಿ ಅವಕಾಶ ಕೊಡುವಂತೆ ಸಿಂಧು ಎಂಬ ಮಹಿಳೆಯ ಬಳಿ ಕೇಳಿದ್ದಾನೆ. ಅದರಂತೆ, ಮೂರು ತಿಂಗಳ ಕಾಲ ಪ್ರತಿ ಗುರುವಾರ ತೋಟದಲ್ಲಿ ಭಜನೆ ನಡೆಸುತ್ತಿದ್ದರು. ಭಜನೆ ಬಳಿಕ, ಪ್ರೇಮಸಾಯಿ ಎಂದು ಹೇಳಿಕೊಂಡಿದ್ದ ವ್ಯಕ್ತಿ ಯಶೋಧಮ್ಮ ಮನೆಗೆ ತೆರಳುತ್ತಿದ್ದ.
ಆನಂತರ, ತೋಟದ ಮನೆಗೇ ಕನ್ನ ಹಾಕಿದ್ದ. ತೋಟದ ಜಾಗವನ್ನು ಶ್ರೀ ಪ್ರೇಮ ಸ್ವರೂಪಿಣಿ ಸಾಯಿ ಸೇವಾ ಸಮಿತಿ ಟ್ರಸ್ಟ್ಗೆ ದಾನವಾಗಿ ಕೊಡುವಂತೆ ಒತ್ತಾಯಿಸಿದ್ದ. ಆದರೆ, ದಾನ ಮಾಡಲು ಸಿಂಧು ಮನೆಯವರು ನಿರಾಕರಿಸಿದ್ದರು.
ಇತ್ತೀಚೆಗೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನೆಲೆಸಿದ್ದ ಚನ್ನಪಟ್ಟಣ ಮೂಲದ ಡಾ.ಸಾಯಿಕುಮಾರಿ, ಕೃಷ್ಣಯ್ಯ ಮತ್ತು ಗಿರೀಶ್ ವಿಜೇಂದ್ರ ಎನ್ನುವವರು ಗುರುಪೂರ್ಣಿಮಾ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಇಲ್ಲಿ ನೆಲೆಸಿದ್ದ ಸಚಿನ್ ಅಕಾರಾಂ ಸರ್ ಗರ್ನನ್ನು ನೋಡುತ್ತಿದ್ದಂತೆ ಈತ ಪ್ರೇಮಸಾಯಿ ಅಲ್ಲ ಎನ್ನುವುದನ್ನು ಖಾತ್ರಿಪಡಿಸಿದ್ದಾರೆ. ಅನುಮಾನಗೊಂಡ ಕೆಲವು ಭಕ್ತರು ಕೊಲ್ಲಾಪುರಕ್ಕೆ ತೆರಳಿ ವ್ಯಕ್ತಿಯ ಪೂರ್ವಾಪರ ವಿಚಾರಿಸಿದ್ದು ಮೋಸದ ಅರಿವಾಗಿರುವುದು ಗೊತ್ತಾಗಿದೆ.
ಆದರೆ, ಅಷ್ಟರಲ್ಲೇ ಹಲವರಿಂದ ಹಣ ಪಡೆದಿದ್ದ ವ್ಯಕ್ತಿ ಮೋಸ ಮಾಡಿದ್ದಾನೆ. ಸಿಂಧು 1.5 ಲಕ್ಷ ರೂ., ವೆಂಕಟೇಶ್, ಚನ್ನೇಗೌಡ ಎನ್ನುವವರು ತಲಾ 1 ಲಕ್ಷ ರೂ, ಎಚ್.ಜೆ.ರಾಜೇಶ್ ಎನ್ನುವವರು 2 ಲಕ್ಷ ರೂ.ಗಳನ್ನು ಕೊಟ್ಟು ಮೋಸ ಹೋಗಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
ಮೋಸದ ವಿಷಯ ಬೆಳಕಿಗೆ ಬರುತ್ತಲೇ ಸಚಿನ್ ಅಕಾರಾಂ ಸರ್ಗರ್ ಆತನ ಜೊತೆಗಿದ್ದ ವಿನಾಯಕ ರಾಜ್, ಸಾಯಿರಾಜ್, ಜಯಂತ್, ಯಶೋದಮ್ಮ, ಉಮಾಶಂಕರ್, ಪ್ರಶಾಂತ್ ಎನ್ನುವವರು ತಲೆಮರೆಸಿಕೊಂಡಿದ್ದಾರೆ.
Fake Baba arrives at Channapatna in Bangalore, calls himself God cheats many in the name of Bajan.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm