ಬ್ರೇಕಿಂಗ್ ನ್ಯೂಸ್
03-09-22 05:12 pm Bangalore Correspondent ಕ್ರೈಂ
ಬೆಂಗಳೂರು, ಸೆ.3: ಡ್ರಾಪ್ ಕೊಡುವ ನೆ ಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಅಖೀಲೇಶ್ (25), ಹಾಸನ ಮೂಲದ ದೀಪು(21) ಬಂಧಿತರು.25 ವರ್ಷದ ಯುವತಿ ಮೇಲೆ ಆತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆ.31ರಂದು ಸಂಜೆ 5 ಗಂಟೆಗೆ ಈಜಿಪುರ ಬಳಿಯಿರುವ ನಿವೇಶನ ನೋಡಿ ಕೊಂಡು ಚರ್ಚ್ಗೆ ಬರುತ್ತಿದ್ದಳು. ಯುವತಿಯನ್ನು ಕಂಡ ಆರೋಪಿಗಳು ತಮ್ಮ ಬೈಕ್ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಅವರ ಗಮನಕ್ಕೆ ಬಾರದಂತೆ ಯುವತಿ ಚರ್ಚ್ ಬಳಿ ಬಂದಾಗ ಆಕೆಯ ಬಳಿ ಬಂದ ಆರೋಪಿಗಳು, “ನಮ್ಮ ಏರಿಯಾದವರಾದ ನಿಮಗೆ ಡ್ರಾಪ್ ಕೊಡುತ್ತೇವೆ ಬನ್ನಿ’ ಎಂದು ಬಲವಂತವಾಗಿ ಬೈಕ್ನಲ್ಲಿ ಕೂರಿಸಿಕೊಂಡಿದ್ದರು. ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಯುವತಿಯೂ ಅವರ ಜತೆ ವಿರೋಧ ವ್ಯಕ್ತಪಡಿಸದೇ ತೆರಳಿದ್ದಳು. ನಂತರ ಹುಸ್ಕೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಊಟ ಮಾಡಿಸಿದ್ದರು. ಇದಾದ ಬಳಿಕ ಏಕಾಏಕಿ ಬಲವಂತವಾಗಿ ಮದ್ಯಪಾನ ಮಾಡಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಆತಂಕಗೊಂಡ ಸಂತ್ರಸ್ತೆ ಬೆಳಗಿನವರೆಗೂ ಪೊದೆಯೊಂದರಲ್ಲಿ ಅವಿತು ಕುಳಿತು, ಬೆಳಗಿನ ಜಾವ ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಮನೆಯವರ ಸಹಾಯ ಪಡೆದು ಬಟ್ಟೆ ಧರಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
25 year old girl raped on her way to the church two arrested in Bangalore. The arrested have been identified as Akilesh and Deepu.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm