ಬ್ರೇಕಿಂಗ್ ನ್ಯೂಸ್
04-09-22 05:44 pm Bangalore Correspondent ಕ್ರೈಂ
ಬೆಂಗಳೂರು,ಸೆ.4: ಅನೈತಿಕ ಸಂಬಂಧವಿದೆ ಎಂದು ಪದೇ ಪದೇ ಅನುಮಾನಿಸುತ್ತಿದ್ದ ಗಂಡನನ್ನು ತನ್ನ ಅಕ್ಕನ ಮಗನ ಸಹಾಯದಿಂದ ಬೆಂಗಳೂರಿನಲ್ಲಿ ಕೊಂದು ಶವವನ್ನು ಊರಿಗೆ ಕೊಂಡೊಯ್ದು ನಾಟಕವಾಡಿದ ಹೆಂಡತಿಯನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ.ಶಿಲ್ಪಾ ಬಂಧಿತ ಮಹಿಳೆ. ಮಹೇಶ್ ಕೊಲೆಯಾದವರು.
ಪತ್ನಿಯ ಶೀಲ ಶಂಕಿಸಿದ ಪತಿ ಕೊಲೆ:
ಮಂಡ್ಯ ಮೂಲದ ಮಹೇಶ್ ಮತ್ತು ಶಿಲ್ಪಾಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಬಳಿಕ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ದಂಪತಿ ವಾಸವಾಗಿದ್ದರು. ಇತ್ತೀಚಿಗೆ ಶಿಲ್ಪಾ ಬೆಂಗಳೂರಲ್ಲಿ ವಾಸವಿದ್ರೆ ಕೆಲಸದ ನಿಮಿತ್ತ ಮಹೇಶ್ ಮಂಡ್ಯದಲ್ಲಿ ವಾಸವಿದ್ದ. ಆಗಾಗ ಬೆಂಗಳೂರಿಗೆ ಬಂದು ಹೋಗ್ತಿದ್ದ ಮಹೇಶ್ ಕುಡಿದು ನಿನಗೆ ಅನೈತಿಕ ಸಂಬಂಧ ಇದೆ ಎಂದು ಶಿಲ್ಪಾಗೆ ಕಾಟ ನೀಡುತ್ತಿದ್ದ. ಬೇಸತ್ತ ಶಿಲ್ಪಾ ತನ್ನ ತಾಯಿ ಬಳಿ ಹೇಳಿಕೊಂಡಿದ್ದಳು. ಕಳೆದ ಗುರುವಾರವೂ ಶಿಲ್ಪಾಳನ್ನ ಭೇಟಿಯಾಗಲು ಬಂದು ಗಲಾಟೆ ಮಾಡುತ್ತಿದ್ದ ಅಳಿಯನಿಗೆ ಬುದ್ಧಿವಾದ ಹೇಳುವಂತೆ ಶಿಲ್ಪಾಳ ತಾಯಿ ತನ್ನ ಹಿರಿಯ ಮಗಳ ಮಗ ಬಾಲಾಜಿಗೆ ಹೇಳಿದ್ದಳು.
ಬುದ್ಧಿ ಹೇಳಲು ಬಂದಿದ್ದ ಬಾಲಾಜಿ ಸಿಟ್ಟಿನಿಂದ ಮಹೇಶ್ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದ. ಈ ವೇಳೆ ಮಹೇಶ್ ಮೃತಪಟ್ಟಿದ್ದ. ಬಳಿಕ ಮೂರ್ಛೆ ರೋಗದಿಂದ ಮಹೇಶ್ ಸಾವನ್ನಪ್ಪಿದ್ದಾನೆ ಎಂದು ಮೃತದೇಹವನ್ನು ಶಿಲ್ಪಾ ಆತನ ಹುಟ್ಟೂರಿಗೆ ತೆಗೆದುಕೊಂಡು ಹೋಗಿದ್ದಳು. ಅನುಮಾನಗೊಂಡ ಮಹೇಶ್ ಪೋಷಕರು ಮಂಡ್ಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ವಶಕ್ಕೆ ಪಡೆದು ವಿಚಾರಿಸಿದಾಗ ಅಸಲಿ ವಿಚಾರ ಬಯಲಾಗಿದೆ. ಕೊಲೆಗೆ ಸಹಕರಿಸಿದ ಶಿಲ್ಪಾ, ಆಕೆಯ ತಾಯಿಯನ್ನ ಮಂಡ್ಯ ಪೊಲೀಸರು ವಶಕ್ಕೆ ಪಡೆದು, ಪ್ರಕರಣವನ್ನು ಕೋಣನಕುಂಟೆ ಠಾಣೆಗೆ ವರ್ಗಾಯಿಸಿದ್ದಾರೆ. ಆರೋಪಿ ಬಾಲಾಜಿ ತಲೆಮರೆಸಿಕೊಂಡಿದ್ದು ಶೋಧಕಾರ್ಯ ಮುಂದುವರೆದಿದೆ.
Bangalore Wife kills the husband with the help of a relative as he was doubting her and takes the body to Mandya stating he died of some health issue but later after the police intervened the matter came to light.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm