ಬ್ರೇಕಿಂಗ್ ನ್ಯೂಸ್
04-09-22 05:44 pm Bangalore Correspondent ಕ್ರೈಂ
ಬೆಂಗಳೂರು,ಸೆ.4: ಅನೈತಿಕ ಸಂಬಂಧವಿದೆ ಎಂದು ಪದೇ ಪದೇ ಅನುಮಾನಿಸುತ್ತಿದ್ದ ಗಂಡನನ್ನು ತನ್ನ ಅಕ್ಕನ ಮಗನ ಸಹಾಯದಿಂದ ಬೆಂಗಳೂರಿನಲ್ಲಿ ಕೊಂದು ಶವವನ್ನು ಊರಿಗೆ ಕೊಂಡೊಯ್ದು ನಾಟಕವಾಡಿದ ಹೆಂಡತಿಯನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ.ಶಿಲ್ಪಾ ಬಂಧಿತ ಮಹಿಳೆ. ಮಹೇಶ್ ಕೊಲೆಯಾದವರು.
ಪತ್ನಿಯ ಶೀಲ ಶಂಕಿಸಿದ ಪತಿ ಕೊಲೆ:
ಮಂಡ್ಯ ಮೂಲದ ಮಹೇಶ್ ಮತ್ತು ಶಿಲ್ಪಾಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಬಳಿಕ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ದಂಪತಿ ವಾಸವಾಗಿದ್ದರು. ಇತ್ತೀಚಿಗೆ ಶಿಲ್ಪಾ ಬೆಂಗಳೂರಲ್ಲಿ ವಾಸವಿದ್ರೆ ಕೆಲಸದ ನಿಮಿತ್ತ ಮಹೇಶ್ ಮಂಡ್ಯದಲ್ಲಿ ವಾಸವಿದ್ದ. ಆಗಾಗ ಬೆಂಗಳೂರಿಗೆ ಬಂದು ಹೋಗ್ತಿದ್ದ ಮಹೇಶ್ ಕುಡಿದು ನಿನಗೆ ಅನೈತಿಕ ಸಂಬಂಧ ಇದೆ ಎಂದು ಶಿಲ್ಪಾಗೆ ಕಾಟ ನೀಡುತ್ತಿದ್ದ. ಬೇಸತ್ತ ಶಿಲ್ಪಾ ತನ್ನ ತಾಯಿ ಬಳಿ ಹೇಳಿಕೊಂಡಿದ್ದಳು. ಕಳೆದ ಗುರುವಾರವೂ ಶಿಲ್ಪಾಳನ್ನ ಭೇಟಿಯಾಗಲು ಬಂದು ಗಲಾಟೆ ಮಾಡುತ್ತಿದ್ದ ಅಳಿಯನಿಗೆ ಬುದ್ಧಿವಾದ ಹೇಳುವಂತೆ ಶಿಲ್ಪಾಳ ತಾಯಿ ತನ್ನ ಹಿರಿಯ ಮಗಳ ಮಗ ಬಾಲಾಜಿಗೆ ಹೇಳಿದ್ದಳು.
ಬುದ್ಧಿ ಹೇಳಲು ಬಂದಿದ್ದ ಬಾಲಾಜಿ ಸಿಟ್ಟಿನಿಂದ ಮಹೇಶ್ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದ. ಈ ವೇಳೆ ಮಹೇಶ್ ಮೃತಪಟ್ಟಿದ್ದ. ಬಳಿಕ ಮೂರ್ಛೆ ರೋಗದಿಂದ ಮಹೇಶ್ ಸಾವನ್ನಪ್ಪಿದ್ದಾನೆ ಎಂದು ಮೃತದೇಹವನ್ನು ಶಿಲ್ಪಾ ಆತನ ಹುಟ್ಟೂರಿಗೆ ತೆಗೆದುಕೊಂಡು ಹೋಗಿದ್ದಳು. ಅನುಮಾನಗೊಂಡ ಮಹೇಶ್ ಪೋಷಕರು ಮಂಡ್ಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ವಶಕ್ಕೆ ಪಡೆದು ವಿಚಾರಿಸಿದಾಗ ಅಸಲಿ ವಿಚಾರ ಬಯಲಾಗಿದೆ. ಕೊಲೆಗೆ ಸಹಕರಿಸಿದ ಶಿಲ್ಪಾ, ಆಕೆಯ ತಾಯಿಯನ್ನ ಮಂಡ್ಯ ಪೊಲೀಸರು ವಶಕ್ಕೆ ಪಡೆದು, ಪ್ರಕರಣವನ್ನು ಕೋಣನಕುಂಟೆ ಠಾಣೆಗೆ ವರ್ಗಾಯಿಸಿದ್ದಾರೆ. ಆರೋಪಿ ಬಾಲಾಜಿ ತಲೆಮರೆಸಿಕೊಂಡಿದ್ದು ಶೋಧಕಾರ್ಯ ಮುಂದುವರೆದಿದೆ.
Bangalore Wife kills the husband with the help of a relative as he was doubting her and takes the body to Mandya stating he died of some health issue but later after the police intervened the matter came to light.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm