ಬ್ರೇಕಿಂಗ್ ನ್ಯೂಸ್
04-09-22 05:44 pm Bangalore Correspondent ಕ್ರೈಂ
ಬೆಂಗಳೂರು,ಸೆ.4: ಅನೈತಿಕ ಸಂಬಂಧವಿದೆ ಎಂದು ಪದೇ ಪದೇ ಅನುಮಾನಿಸುತ್ತಿದ್ದ ಗಂಡನನ್ನು ತನ್ನ ಅಕ್ಕನ ಮಗನ ಸಹಾಯದಿಂದ ಬೆಂಗಳೂರಿನಲ್ಲಿ ಕೊಂದು ಶವವನ್ನು ಊರಿಗೆ ಕೊಂಡೊಯ್ದು ನಾಟಕವಾಡಿದ ಹೆಂಡತಿಯನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ.ಶಿಲ್ಪಾ ಬಂಧಿತ ಮಹಿಳೆ. ಮಹೇಶ್ ಕೊಲೆಯಾದವರು.
ಪತ್ನಿಯ ಶೀಲ ಶಂಕಿಸಿದ ಪತಿ ಕೊಲೆ:
ಮಂಡ್ಯ ಮೂಲದ ಮಹೇಶ್ ಮತ್ತು ಶಿಲ್ಪಾಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಬಳಿಕ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ದಂಪತಿ ವಾಸವಾಗಿದ್ದರು. ಇತ್ತೀಚಿಗೆ ಶಿಲ್ಪಾ ಬೆಂಗಳೂರಲ್ಲಿ ವಾಸವಿದ್ರೆ ಕೆಲಸದ ನಿಮಿತ್ತ ಮಹೇಶ್ ಮಂಡ್ಯದಲ್ಲಿ ವಾಸವಿದ್ದ. ಆಗಾಗ ಬೆಂಗಳೂರಿಗೆ ಬಂದು ಹೋಗ್ತಿದ್ದ ಮಹೇಶ್ ಕುಡಿದು ನಿನಗೆ ಅನೈತಿಕ ಸಂಬಂಧ ಇದೆ ಎಂದು ಶಿಲ್ಪಾಗೆ ಕಾಟ ನೀಡುತ್ತಿದ್ದ. ಬೇಸತ್ತ ಶಿಲ್ಪಾ ತನ್ನ ತಾಯಿ ಬಳಿ ಹೇಳಿಕೊಂಡಿದ್ದಳು. ಕಳೆದ ಗುರುವಾರವೂ ಶಿಲ್ಪಾಳನ್ನ ಭೇಟಿಯಾಗಲು ಬಂದು ಗಲಾಟೆ ಮಾಡುತ್ತಿದ್ದ ಅಳಿಯನಿಗೆ ಬುದ್ಧಿವಾದ ಹೇಳುವಂತೆ ಶಿಲ್ಪಾಳ ತಾಯಿ ತನ್ನ ಹಿರಿಯ ಮಗಳ ಮಗ ಬಾಲಾಜಿಗೆ ಹೇಳಿದ್ದಳು.
ಬುದ್ಧಿ ಹೇಳಲು ಬಂದಿದ್ದ ಬಾಲಾಜಿ ಸಿಟ್ಟಿನಿಂದ ಮಹೇಶ್ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದ. ಈ ವೇಳೆ ಮಹೇಶ್ ಮೃತಪಟ್ಟಿದ್ದ. ಬಳಿಕ ಮೂರ್ಛೆ ರೋಗದಿಂದ ಮಹೇಶ್ ಸಾವನ್ನಪ್ಪಿದ್ದಾನೆ ಎಂದು ಮೃತದೇಹವನ್ನು ಶಿಲ್ಪಾ ಆತನ ಹುಟ್ಟೂರಿಗೆ ತೆಗೆದುಕೊಂಡು ಹೋಗಿದ್ದಳು. ಅನುಮಾನಗೊಂಡ ಮಹೇಶ್ ಪೋಷಕರು ಮಂಡ್ಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ವಶಕ್ಕೆ ಪಡೆದು ವಿಚಾರಿಸಿದಾಗ ಅಸಲಿ ವಿಚಾರ ಬಯಲಾಗಿದೆ. ಕೊಲೆಗೆ ಸಹಕರಿಸಿದ ಶಿಲ್ಪಾ, ಆಕೆಯ ತಾಯಿಯನ್ನ ಮಂಡ್ಯ ಪೊಲೀಸರು ವಶಕ್ಕೆ ಪಡೆದು, ಪ್ರಕರಣವನ್ನು ಕೋಣನಕುಂಟೆ ಠಾಣೆಗೆ ವರ್ಗಾಯಿಸಿದ್ದಾರೆ. ಆರೋಪಿ ಬಾಲಾಜಿ ತಲೆಮರೆಸಿಕೊಂಡಿದ್ದು ಶೋಧಕಾರ್ಯ ಮುಂದುವರೆದಿದೆ.
Bangalore Wife kills the husband with the help of a relative as he was doubting her and takes the body to Mandya stating he died of some health issue but later after the police intervened the matter came to light.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am