ಬ್ರೇಕಿಂಗ್ ನ್ಯೂಸ್
04-09-22 11:00 pm HK News Desk ಕ್ರೈಂ
ಬಳ್ಳಾರಿ, ಸೆ 04: ಗಣಿ ನಾಡು ಬಳ್ಳಾರಿಯಲ್ಲಿ ವರದಕ್ಷಿಣೆ ವಂಚನೆ ಪ್ರಕರಣವೊಂದು ಬಯಲಿಗೆ ಬಂದಿದೆ. ಹೈದರಾಬಾದ್ ಮೂಲದ ವೈದ್ಯೆಗೆ ಮೋಸ ಮಾಡಿ ಮದುವೆಯಾದ ಬಳ್ಳಾರಿ ಮೂಲದ ಇಂಜಿನಿಯರ್, ಇದೀಗ ಮತ್ತೊಂದು ಮದುವೆ ಆಗುವ ಮೂಲಕ ವೈದ್ಯೆಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಹೈದರಾಬಾದ್ ಮೂಲದ ವೈದ್ಯೆ ಮೌನಿಕಾ ಅವರು ಬಳ್ಳಾರಿ ಮೂಲದ ಇಂಜಿನಿಯರ್ ರಘುರಾಮ ರೆಡ್ಡಿ ಜೊತೆ 2019ರಲ್ಲಿ ಮದುವೆ ಆಗಿದ್ದರು. ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿರುದಾಗಿ ಸುಳ್ಳು ಹೇಳಿ 50 ಲಕ್ಷ ನಗದು, ಒಂದು ಕೆಜಿ ಬಂಗಾರ ಹಾಗೂ ಅರ್ಧ ಕೆಜಿ ಬೆಳ್ಳಿಯನ್ನು ರುಘುರಾಮ್ ವರದಕ್ಷಿಣೆ ಪಡೆದುಕೊಂಡಿದ್ದ. ಮದುವೆ ಆಗಿ ಎರಡು ತಿಂಗಳು ಕೂಡ ಸಂಸಾರ ಮಾಡದ ರಘುರಾಮ ಹಣಕ್ಕಾಗಿ ಹೆಂಡ್ತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇತ್ತ ಮೊದಲನೇ ಹೆಂಡ್ತಿಗೆ ಗೊತ್ತಾಗದೇ ಎರಡನೇ ಮದುವೆಯಾಗಿ ವಂಚನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಮೋನಿಕಾ ಕುಟುಂಬದವರು ಸಂಗನಕಲ್ಲು ಗ್ರಾಮದಲ್ಲಿರುವ ರಘುರಾಮ ರೆಡ್ಡಿ ಅವರ ಮನೆಯ ಹತ್ತಿರ ಪ್ರಶ್ನಿಸಲು ಹೋದಾಗ ಇಬ್ಬರ ಮಧ್ಯೆ ಜಗಳವಾಗಿದೆ. ಈ ಸಂದರ್ಭದಲ್ಲಿ ರಘುರಾಮರೆಡ್ಡಿ ಅವರು ಕುಡುಗೋಲು ಹಿಡಿದುಕೊಂಡು ಓಡುತ್ತಿರುವ ಫೋಟೋ ಮತ್ತು ವಿಡಿಯೋ, ಮೋನಿಕಾ ಅವರು ಗಾಯಗೊಂಡು ಅಳುತ್ತಿರುವ ಮತ್ತು ಗಲಾಟೆ ಮಾಡುತ್ತಿರುವ ವಿಡಿಯೋಗಳು ಮೊಬೈಲ್ಗಳಲ್ಲಿ ಹರಿದಾಡುತ್ತಿವೆ.

7 ಜನರ ವಿರುದ್ಧ ಪ್ರಕರಣ ದಾಖಲು:
ಘಟನೆಗೆ ಸಂಬಂಧಿಸಿದಂತೆ ಮೋನಿಕಾ ಅವರು ಬಳ್ಳಾರಿ ಮಹಿಳಾ ಠಾಣೆಯಲ್ಲಿ ರಘುರಾಮರೆಡ್ಡಿ ಸೇರಿದಂತೆ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆಂದು ಸುಳ್ಳು ಹೇಳಿ ಮದುವೆಯಾಗಿದ್ದಾರೆಂಬುದು ಮೊದಲ ಹೆಂಡತಿ ಕುಟುಂಬದವರ ಆರೋಪವಾಗಿದೆ.
Bellary software husband cheats doctor wife of Hyderabad and gets second marriage, dowry harassment case has been filed against him by wife's family.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm