ಬ್ರೇಕಿಂಗ್ ನ್ಯೂಸ್
04-09-22 11:00 pm HK News Desk ಕ್ರೈಂ
ಬಳ್ಳಾರಿ, ಸೆ 04: ಗಣಿ ನಾಡು ಬಳ್ಳಾರಿಯಲ್ಲಿ ವರದಕ್ಷಿಣೆ ವಂಚನೆ ಪ್ರಕರಣವೊಂದು ಬಯಲಿಗೆ ಬಂದಿದೆ. ಹೈದರಾಬಾದ್ ಮೂಲದ ವೈದ್ಯೆಗೆ ಮೋಸ ಮಾಡಿ ಮದುವೆಯಾದ ಬಳ್ಳಾರಿ ಮೂಲದ ಇಂಜಿನಿಯರ್, ಇದೀಗ ಮತ್ತೊಂದು ಮದುವೆ ಆಗುವ ಮೂಲಕ ವೈದ್ಯೆಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಹೈದರಾಬಾದ್ ಮೂಲದ ವೈದ್ಯೆ ಮೌನಿಕಾ ಅವರು ಬಳ್ಳಾರಿ ಮೂಲದ ಇಂಜಿನಿಯರ್ ರಘುರಾಮ ರೆಡ್ಡಿ ಜೊತೆ 2019ರಲ್ಲಿ ಮದುವೆ ಆಗಿದ್ದರು. ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿರುದಾಗಿ ಸುಳ್ಳು ಹೇಳಿ 50 ಲಕ್ಷ ನಗದು, ಒಂದು ಕೆಜಿ ಬಂಗಾರ ಹಾಗೂ ಅರ್ಧ ಕೆಜಿ ಬೆಳ್ಳಿಯನ್ನು ರುಘುರಾಮ್ ವರದಕ್ಷಿಣೆ ಪಡೆದುಕೊಂಡಿದ್ದ. ಮದುವೆ ಆಗಿ ಎರಡು ತಿಂಗಳು ಕೂಡ ಸಂಸಾರ ಮಾಡದ ರಘುರಾಮ ಹಣಕ್ಕಾಗಿ ಹೆಂಡ್ತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇತ್ತ ಮೊದಲನೇ ಹೆಂಡ್ತಿಗೆ ಗೊತ್ತಾಗದೇ ಎರಡನೇ ಮದುವೆಯಾಗಿ ವಂಚನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಮೋನಿಕಾ ಕುಟುಂಬದವರು ಸಂಗನಕಲ್ಲು ಗ್ರಾಮದಲ್ಲಿರುವ ರಘುರಾಮ ರೆಡ್ಡಿ ಅವರ ಮನೆಯ ಹತ್ತಿರ ಪ್ರಶ್ನಿಸಲು ಹೋದಾಗ ಇಬ್ಬರ ಮಧ್ಯೆ ಜಗಳವಾಗಿದೆ. ಈ ಸಂದರ್ಭದಲ್ಲಿ ರಘುರಾಮರೆಡ್ಡಿ ಅವರು ಕುಡುಗೋಲು ಹಿಡಿದುಕೊಂಡು ಓಡುತ್ತಿರುವ ಫೋಟೋ ಮತ್ತು ವಿಡಿಯೋ, ಮೋನಿಕಾ ಅವರು ಗಾಯಗೊಂಡು ಅಳುತ್ತಿರುವ ಮತ್ತು ಗಲಾಟೆ ಮಾಡುತ್ತಿರುವ ವಿಡಿಯೋಗಳು ಮೊಬೈಲ್ಗಳಲ್ಲಿ ಹರಿದಾಡುತ್ತಿವೆ.

7 ಜನರ ವಿರುದ್ಧ ಪ್ರಕರಣ ದಾಖಲು:
ಘಟನೆಗೆ ಸಂಬಂಧಿಸಿದಂತೆ ಮೋನಿಕಾ ಅವರು ಬಳ್ಳಾರಿ ಮಹಿಳಾ ಠಾಣೆಯಲ್ಲಿ ರಘುರಾಮರೆಡ್ಡಿ ಸೇರಿದಂತೆ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆಂದು ಸುಳ್ಳು ಹೇಳಿ ಮದುವೆಯಾಗಿದ್ದಾರೆಂಬುದು ಮೊದಲ ಹೆಂಡತಿ ಕುಟುಂಬದವರ ಆರೋಪವಾಗಿದೆ.
Bellary software husband cheats doctor wife of Hyderabad and gets second marriage, dowry harassment case has been filed against him by wife's family.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm