50 ಲಕ್ಷ ನಗದು, ಒಂದು ಕೆಜಿ ಬಂಗಾರ ಕೊಟ್ರು ತೀರದ ವರದಕ್ಷಿಣೆ ದಾಹ ; ಡಾಕ್ಟರ್ ಹೆಂಡ್ತಿಗೆ ಕೈಕೊಟ್ಟು ಇನ್ನೊಂದು ಮದುವೆಯಾದ 'ಧನ' ಪಿಶಾಚಿ ಗಂಡ ! 

04-09-22 11:00 pm       HK News Desk   ಕ್ರೈಂ

ಗಣಿ ನಾಡು ಬಳ್ಳಾರಿಯಲ್ಲಿ ವರದಕ್ಷಿಣೆ ವಂಚನೆ ಪ್ರಕರಣವೊಂದು ಬಯಲಿಗೆ ಬಂದಿದೆ. ಹೈದರಾಬಾದ್​ ಮೂಲದ ವೈದ್ಯೆಗೆ ಮೋಸ ಮಾಡಿ ಮದುವೆಯಾದ ಬಳ್ಳಾರಿ ಮೂಲದ ಇಂಜಿನಿಯರ್​, ಇದೀಗ ಮತ್ತೊಂದು ಮದುವೆ ಆಗುವ ಮೂಲಕ ವೈದ್ಯೆಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಬಳ್ಳಾರಿ, ಸೆ 04: ಗಣಿ ನಾಡು ಬಳ್ಳಾರಿಯಲ್ಲಿ ವರದಕ್ಷಿಣೆ ವಂಚನೆ ಪ್ರಕರಣವೊಂದು ಬಯಲಿಗೆ ಬಂದಿದೆ. ಹೈದರಾಬಾದ್​ ಮೂಲದ ವೈದ್ಯೆಗೆ ಮೋಸ ಮಾಡಿ ಮದುವೆಯಾದ ಬಳ್ಳಾರಿ ಮೂಲದ ಇಂಜಿನಿಯರ್​, ಇದೀಗ ಮತ್ತೊಂದು ಮದುವೆ ಆಗುವ ಮೂಲಕ ವೈದ್ಯೆಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಹೈದರಾಬಾದ್​ ಮೂಲದ ವೈದ್ಯೆ ಮೌನಿಕಾ ಅವರು ‌ಬಳ್ಳಾರಿ ಮೂಲದ ಇಂಜಿನಿಯರ್ ರಘುರಾಮ ರೆಡ್ಡಿ ಜೊತೆ 2019ರಲ್ಲಿ ಮದುವೆ ಆಗಿದ್ದರು. ಆಸ್ಟ್ರೇಲಿಯಾದಲ್ಲಿ ‌ಕೆಲಸ ಮಾಡುತ್ತಿರುದಾಗಿ ಸುಳ್ಳು ಹೇಳಿ 50 ಲಕ್ಷ ನಗದು, ಒಂದು ಕೆಜಿ ಬಂಗಾರ ಹಾಗೂ ಅರ್ಧ ಕೆಜಿ ಬೆಳ್ಳಿಯನ್ನು ರುಘುರಾಮ್​ ವರದಕ್ಷಿಣೆ ಪಡೆದುಕೊಂಡಿದ್ದ. ಮದುವೆ ಆಗಿ ಎರಡು ತಿಂಗಳು ಕೂಡ ಸಂಸಾರ ಮಾಡದ ರಘುರಾಮ ಹಣಕ್ಕಾಗಿ ಹೆಂಡ್ತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇತ್ತ ಮೊದಲನೇ ಹೆಂಡ್ತಿಗೆ ಗೊತ್ತಾಗದೇ ಎರಡನೇ ಮದುವೆಯಾಗಿ ವಂಚನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಮೋನಿಕಾ ಕುಟುಂಬದವರು ಸಂಗನಕಲ್ಲು ಗ್ರಾಮದಲ್ಲಿರುವ ರಘುರಾಮ ರೆಡ್ಡಿ ಅವರ ಮನೆಯ ಹತ್ತಿರ ಪ್ರಶ್ನಿಸಲು ಹೋದಾಗ ಇಬ್ಬರ ಮಧ್ಯೆ ಜಗಳವಾಗಿದೆ. ಈ ಸಂದರ್ಭದಲ್ಲಿ ರಘುರಾಮರೆಡ್ಡಿ ಅವರು ಕುಡುಗೋಲು ಹಿಡಿದುಕೊಂಡು ಓಡುತ್ತಿರುವ ಫೋಟೋ ಮತ್ತು ವಿಡಿಯೋ, ಮೋನಿಕಾ ಅವರು ಗಾಯಗೊಂಡು ಅಳುತ್ತಿರುವ ಮತ್ತು ಗಲಾಟೆ ಮಾಡುತ್ತಿರುವ ವಿಡಿಯೋಗಳು ಮೊಬೈಲ್​ಗಳಲ್ಲಿ ಹರಿದಾಡುತ್ತಿವೆ.

7 ಜನರ ವಿರುದ್ಧ ಪ್ರಕರಣ ದಾಖಲು:

 ಘಟನೆಗೆ ಸಂಬಂಧಿಸಿದಂತೆ ಮೋನಿಕಾ ಅವರು ಬಳ್ಳಾರಿ ಮಹಿಳಾ ಠಾಣೆಯಲ್ಲಿ ರಘುರಾಮರೆಡ್ಡಿ ಸೇರಿದಂತೆ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಸಾಫ್ಟ್​ವೇರ್​ ಇಂಜಿನಿಯರ್​ ಆಗಿ ಕೆಲಸ ಮಾಡುತ್ತಿದ್ದಾರೆಂದು ಸುಳ್ಳು ಹೇಳಿ ಮದುವೆಯಾಗಿದ್ದಾರೆಂಬುದು ಮೊದಲ ಹೆಂಡತಿ ಕುಟುಂಬದವರ ಆರೋಪವಾಗಿದೆ.

Bellary software husband cheats doctor wife of Hyderabad and gets second marriage,  dowry harassment case has been filed against him by wife's family.