ಬ್ರೇಕಿಂಗ್ ನ್ಯೂಸ್
07-10-20 02:22 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 07: ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಕರಣದ ಪ್ರಮುಖ ಆರೋಪಿ ಜೊತೆ 19 ವರ್ಷದ ಸಂತ್ರಸ್ತ ಯುವತಿ ನಿರಂತರ ಸಂಪರ್ಕದಲ್ಲಿದ್ದಳು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
ಸೆಪ್ಟೆಂಬರ್ 14 ರಂದು ನಡೆದಿದ್ದ ಯುವತಿಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಅದೇ ಗ್ರಾಮದ ಸಂದೀಪ್ ಸಿಂಗ್ ಪ್ರಮುಖ ಆರೋಪಿ. ಈತನ ಜೊತೆ ಸಂತ್ರಸ್ತೆ ಯುವತಿ ನಿರಂತರ ಸಂಪರ್ಕದಲ್ಲಿದ್ದ ವಿಚಾರ ಕಾಲ್ ಡಿಟೈಲ್ಸ್ ನಲ್ಲಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ಕುಟುಂಬ ಮತ್ತು ಆರೋಪಿ ಸಂದೀಪ್ ಫೋನ್ ಟ್ರ್ಯಾಕ್ ಮಾಡಿರುವ ಪೊಲೀಸರು, ಆರೋಪಿಯು ಯುವತಿ ಜೊತೆಗೆ ನಿರಂತರ ದೂರವಾಣಿ ಸಂಪರ್ಕದಲ್ಲಿದ್ದ. ಸಂತ್ರಸ್ತೆಯ ಸಹೋದರನ ಫೋನ್ ನಿಂದ ಆರೋಪಿ ಸಂದೀಪ್ ಗೆ ನಿಯಮಿತವಾಗಿ ಕರೆಗಳು ಬರುತ್ತಿದ್ದವು. ಈ ದೂರವಾಣಿ ಸಂಭಾಷಣೆಗಳು 2019 ಅಕ್ಟೋಬರ್ 13ರಿಂದ ಪ್ರಾರಂಭವಾಗಿದ್ದವು. ಸಂತ್ರಸ್ತೆ ನೆಲೆಸಿದ್ದ ಹಳ್ಳಿ ಬೂಲ್ ಗಾಹಿಯಿಂದ ಕೇವಲ 2 ಕಿ.ಮೀ ವ್ಯಾಪ್ತಿಯಲ್ಲಿ ಹೆಚ್ಚಿನ ಕರೆಗಳನ್ನು ಮಾಡಲಾಗಿದೆ. ಎರಡು ಫೋನ್ ನಂಬರ್ ಗಳ ನಡುವೆ, ಒಟ್ಟು 104 ಬಾರಿ ಸಂಪರ್ಕ ಆಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ಆರೋಪಿ ನಡುವೆ ನಿರಂತರ ಸಂಪರ್ಕ ಇತ್ತು ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಹಲ್ಲೆ ಮಾಡಿದ್ದರು. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವಾರಗಳ ನಂತರ ಸೆ.29ರಂದು ಮೃತಪಟ್ಟಿದ್ದಳು.

ಪ್ರಕರಣದ ಕುರಿತು ದೇಶಾದ್ಯಂತ ಆಕ್ರೋಶ ಕೇಳಿಬರುತ್ತಿರುವ ಬೆನ್ನಲ್ಲೇ, ಯುವತಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಆಲಿಘಢ ಐಜಿ ಪಿಯೂಷ್ ಮೊರ್ಡಿಯಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನಾಲ್ವರು ವ್ಯಕ್ತಿಗಳು ಕ್ರೂರವಾಗಿ ನಡೆದುಕೊಂಡಿದ್ದಾರೆ. ಸಾಮೂಹಿಕ ಅತ್ಯಾಚಾರವಾಗಿದೆ ಎಂಬುದರ ಬಗ್ಗೆ ವೈದ್ಯಕೀಯ ಪರೀಕ್ಷೆಯಲ್ಲಿ ಉಲ್ಲೇಖವಾಗಿಲ್ಲ ಎಂದು ತಿಳಿಸಿದ್ದರು.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm