ಸಿದ್ದಕಟ್ಟೆ ; ಕಟ್ಟಡ ಕಾಮಗಾರಿ ವೇಳೆ ತಲೆಗೆ ಕಲ್ಲು ಬಿದ್ದು ಮೇಸ್ತ್ರಿ ಸಾವು

07-10-20 02:56 pm       Mangalore Correspondent   ಕ್ರೈಂ

ಕಟ್ಟಡ ಕಾಮಗಾರಿ ವೇಳೆ ಆಕಸ್ಮಿಕವಾಗಿ ತಲೆಯ ಮೇಲೆ ಕಲ್ಲು ಬಿದ್ದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.

ಬಂಟ್ವಾಳ, ಅ.07: ಕಟ್ಟಡ ಕಾಮಗಾರಿ ವೇಳೆ ಆಕಸ್ಮಿಕವಾಗಿ ತಲೆಯ ಮೇಲೆ ಕಲ್ಲು ಬಿದ್ದ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.

ಸಿದ್ದಕಟ್ಟೆ ಮಂಚಕಲ್ಲು ನಿವಾಸಿ ಸೇಸಪ್ಪ ಗೌಡ ಎಂಬವರ ಪುತ್ರ ರಮಾನಂದ ಗೌಡ (30) ಮೃತಪಟ್ಟವರು. ಸಿದ್ದಕಟ್ಟೆ ಸಮೀಪದ ಸಂಗಬೆಟ್ಟು ಎಂಬಲ್ಲಿ ಮನೆ ನಿರ್ಮಾಣ ಕಾಮಗಾರಿಯ ವೇಳೆ ಮೇಸ್ತ್ರಿ ಕೆಲಸ ಮಾಡುತ್ತಿದ್ದಾಗ ಕಟ್ಟಡದ ಮೇಲಿನಿಂದ ಕಲ್ಲು ಮೈಮೇಲೆ ಬಿದ್ದಿದೆ. ರಮಾನಂದ ಅವರ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. 

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.