ಬ್ರೇಕಿಂಗ್ ನ್ಯೂಸ್
05-09-22 10:45 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಹಿಳೆಯರ ಸರ ಸುಲಿಗೆ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಲಿಗೆ ಮಾಡಿದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಪೋನ್ ಸಹಿತ ಒಟ್ಟು 5 ಲಕ್ಷ ಮೌಲ್ಯ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ(39), ಉರ್ವಾ ನಿವಾಸಿ ಸುಜಿತ್ ಶೆಟ್ಟಿ (40), ಪದವಿನಂಗಡಿ ನಿವಾಸಿ ಸುರೇಶ್ ರೈ(39) ಬಂಧಿತರು. ಕಳೆದ ಆಗಸ್ಟ್ ತಿಂಗಳಲ್ಲಿ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಸರ ಸುಲಿಗೆ ಪ್ರಕರಣ, ಕಂಕನಾಡಿ ಠಾಣೆ ವ್ಯಾಪ್ತಿಯಲ್ಲಿ 1 ಸರ ಸುಲಿಗೆ ಪ್ರಕರಣ ದಾಖಲಾಗಿತ್ತು.
ಆ.14ರಂದು ಮಂಗಳೂರು ಕದ್ರಿ ಆಳ್ವಾರಿಸ್ ರಸ್ತೆಯಲ್ಲಿ ಪುಣೆ ಮೂಲದ ಮಹಿಳೆಯ ಸರ ಕಳ್ಳತನ ಆಗಿತ್ತು. ಅನಂತರ ಆ.24 ರಂದು ಕುಲಶೇಖರ ಎವರೆಸ್ಟ್ ಪ್ಲಾಸ್ಟಿಕ್ ಫ್ಯಾಕ್ಟರಿಯ ರಸ್ತೆಯಲ್ಲಿ ಮಹಿಳೆಯ ಸರ ಸುಲಿಗೆ ಪ್ರಕರಣ ದಾಖಲಾಗಿತ್ತು. ಆ.25 ರಂದು ಮಂಗಳೂರು ನಗರ ಕಂಕನಾಡಿ ಪೊಲೀಸ್ ಠಾಣೆಯ ಶಕ್ತಿನಗರದ ರಾಜೀವ ನಗರದಲ್ಲಿ ಮಹಿಳೆ ಸರವನ್ನು ಸುಲಿಗೆ ಮಾಡಲಾಗಿತ್ತು.
ಕೃತ್ಯದ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದರು. ಮಹಿಳೆಯರ ಸರ ಸುಲಿಗೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳು ಮಂಗಳೂರು ನಗರದ ಕಾರ್ ಸ್ಟ್ರೀಟ್ ಬಳಿ ಚಿನ್ನದ ಸರವನ್ನು ಮಾರಾಟ ಮಾಡಲು ಬಂದಿದ್ದರು. ಜುವೆಲ್ಲರಿಗೆ ಬಂದಿದ್ದ ಮಾಹಿತಿ ಪಡೆದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ, ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿಗಳ ಪೈಕಿ ಜಗದೀಶ್ ರಿಕ್ಷಾ ಚಾಲಕನಾಗಿದ್ದು, ಸುಜಿತ್ ಶೆಟ್ಟಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ. ಸುರೇಶ್ ರೈ ಟೆಂಪೋ ಚಾಲಕನಾಗಿರುತ್ತಾನೆ. ಸುಜಿತ್ ಶೆಟ್ಟಿ ಮಂಗಳೂರಿನಲ್ಲಿ 2002ರಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ.
Mangalore Three robbers held for snatching gold and selling it to gold smith.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm