ಬ್ರೇಕಿಂಗ್ ನ್ಯೂಸ್
05-09-22 10:45 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಹಿಳೆಯರ ಸರ ಸುಲಿಗೆ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಲಿಗೆ ಮಾಡಿದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಪೋನ್ ಸಹಿತ ಒಟ್ಟು 5 ಲಕ್ಷ ಮೌಲ್ಯ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ(39), ಉರ್ವಾ ನಿವಾಸಿ ಸುಜಿತ್ ಶೆಟ್ಟಿ (40), ಪದವಿನಂಗಡಿ ನಿವಾಸಿ ಸುರೇಶ್ ರೈ(39) ಬಂಧಿತರು. ಕಳೆದ ಆಗಸ್ಟ್ ತಿಂಗಳಲ್ಲಿ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಸರ ಸುಲಿಗೆ ಪ್ರಕರಣ, ಕಂಕನಾಡಿ ಠಾಣೆ ವ್ಯಾಪ್ತಿಯಲ್ಲಿ 1 ಸರ ಸುಲಿಗೆ ಪ್ರಕರಣ ದಾಖಲಾಗಿತ್ತು.
ಆ.14ರಂದು ಮಂಗಳೂರು ಕದ್ರಿ ಆಳ್ವಾರಿಸ್ ರಸ್ತೆಯಲ್ಲಿ ಪುಣೆ ಮೂಲದ ಮಹಿಳೆಯ ಸರ ಕಳ್ಳತನ ಆಗಿತ್ತು. ಅನಂತರ ಆ.24 ರಂದು ಕುಲಶೇಖರ ಎವರೆಸ್ಟ್ ಪ್ಲಾಸ್ಟಿಕ್ ಫ್ಯಾಕ್ಟರಿಯ ರಸ್ತೆಯಲ್ಲಿ ಮಹಿಳೆಯ ಸರ ಸುಲಿಗೆ ಪ್ರಕರಣ ದಾಖಲಾಗಿತ್ತು. ಆ.25 ರಂದು ಮಂಗಳೂರು ನಗರ ಕಂಕನಾಡಿ ಪೊಲೀಸ್ ಠಾಣೆಯ ಶಕ್ತಿನಗರದ ರಾಜೀವ ನಗರದಲ್ಲಿ ಮಹಿಳೆ ಸರವನ್ನು ಸುಲಿಗೆ ಮಾಡಲಾಗಿತ್ತು.
ಕೃತ್ಯದ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದರು. ಮಹಿಳೆಯರ ಸರ ಸುಲಿಗೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳು ಮಂಗಳೂರು ನಗರದ ಕಾರ್ ಸ್ಟ್ರೀಟ್ ಬಳಿ ಚಿನ್ನದ ಸರವನ್ನು ಮಾರಾಟ ಮಾಡಲು ಬಂದಿದ್ದರು. ಜುವೆಲ್ಲರಿಗೆ ಬಂದಿದ್ದ ಮಾಹಿತಿ ಪಡೆದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ, ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿಗಳ ಪೈಕಿ ಜಗದೀಶ್ ರಿಕ್ಷಾ ಚಾಲಕನಾಗಿದ್ದು, ಸುಜಿತ್ ಶೆಟ್ಟಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ. ಸುರೇಶ್ ರೈ ಟೆಂಪೋ ಚಾಲಕನಾಗಿರುತ್ತಾನೆ. ಸುಜಿತ್ ಶೆಟ್ಟಿ ಮಂಗಳೂರಿನಲ್ಲಿ 2002ರಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ.
Mangalore Three robbers held for snatching gold and selling it to gold smith.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm