ಬ್ರೇಕಿಂಗ್ ನ್ಯೂಸ್
07-09-22 10:45 pm Mangalore Correspondent ಕ್ರೈಂ
ಮಂಗಳೂರು, ಸೆ.7 : ಬೋಳಾರದ ಮಣಪ್ಪುರಂ ಫೈನಾನ್ಸ್ ಕಂಪನಿಯಲ್ಲಿ ನಕಲಿ ಚಿನ್ನ ಇಟ್ಟು 13 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿದ ಬಗ್ಗೆ ಮೂವರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2020ರ ಸೆ.12ರಿಂದ 2021ರ ಫೆ.18ರ ನಡುವೆ ರಮ್ ಸೀನಾ, ಅಕ್ತರೀ ಖಾನ್ ಮತ್ತು ಫಿರೋಜ್ ಖಾನ್ ಎಂಬ ಮೂವರು ಸೇರಿ ವಿವಿಧ ಸಂದರ್ಭಗಳಲ್ಲಿ ಒಟ್ಟು 401 ಗ್ರಾಮ್ ಚಿನ್ನಾಭರಣವನ್ನು ಇಟ್ಟು ಹಣ ಸಾಲ ಪಡೆದಿದ್ದಾರೆ. ಅಡಮಾನ ಇಡುವ ಸಂದರ್ಭದಲ್ಲಿ ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಎಂದು ಹೇಳಿದ್ದರು. ಆನಂತರ 2021ರ ಮಾರ್ಚ್ 4ರಂದು ಮಣಪ್ಪುರಂ ಫೈನಾನ್ಸ್ ಕಂಪನಿಯ ವಿಜಿಲೆನ್ಸ್ ವಿಭಾಗವು ಪರಿಶೀಲನೆ ನಡೆಸಿದಾಗ, ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಅಲ್ಲ. ನಕಲಿ ಚಿನ್ನ ಎನ್ನುವುದು ಕಂಡುಬಂದಿದೆ.
ಆಬಳಿಕ ಸಾಲ ತೆಗೆದುಕೊಂಡಿದ್ದ ಮೂವರಿಗೆ ನೋಟೀಸ್ ಮಾಡಿದರೂ, ಸಾಲ ಪಾವತಿ ಮಾಡಿರುವುದಿಲ್ಲ. ಈ ಬಗ್ಗೆ ನಕಲಿ ಚಿನ್ನ ಇಟ್ಟು ಮೋಸ ಮಾಡಿದ್ದಾಗಿ ಮಣಪ್ಪುರಂ ಸಂಸ್ಥೆಯ ಏರಿಯಾ ಹೆಡ್ ಬಂಡಿ ಜನಾರ್ದನ ರೆಡ್ಡಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಕೇಳಿದರೆ, ಎರಡೂ ಕಡೆಯಿಂದ ದೂರು ಬಂದಿದೆ ಎಂದಿದ್ದಾರೆ. ಇದಕ್ಕೂ ಮೊದಲೇ ಫಿರೋಜ್ ಖಾನ್ ಕಡೆಯವರು ದೂರು ನೀಡಿದ್ದು, ತಮ್ಮ ಚಿನ್ನವನ್ನು ಸಂಸ್ಥೆಯವರೇ ನಕಲಿ ಮಾಡಿದ್ದಾರೆಂದು ದೂರಿದ್ದಾರೆ. ಈ ಬಗ್ಗೆ ಕೋರ್ಟಿನಲ್ಲಿ ದಾವೆ ಹೂಡಿದ್ದು ಈಗ ಸಂಸ್ಥೆಯವರು ಕೂಡ ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
Mangalore Fraud by pledging fake gold in Manappuram, case filed.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm