ಬ್ರೇಕಿಂಗ್ ನ್ಯೂಸ್
08-09-22 07:51 pm Mangalore Correspondent ಕ್ರೈಂ
ಉಳ್ಳಾಲ, ಆ.8: ಸೋಮೇಶ್ವರ ಬೀಚ್ ಬಳಿಯ ಹೋಂ ಸ್ಟೇ ಒಂದಕ್ಕೆ ನಿನ್ನೆ ಸಂಜೆ ಕನ್ನ ಹಾಕಿದ್ದ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಎರಡು ಮನೆಗಳಿಂದ ನಗ, ನಗದು ದೋಚಿದ್ದ ಕಳ್ಳನನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಮೊವಾಝ್ (35) ಬಂಧಿತ ಖದೀಮ. ಆರೋಪಿ ಮೊವಾಝ್ ಕೇರಳದ ಕಣ್ಣೂರಿನ ಪತ್ನಿ ಮನೆಯಲ್ಲೇ ನೆಲೆಸಿದ್ದು ಆಗಾಗ್ಗೆ ಮಂಗಳೂರಿಗೆ ಬಂದು ಕಳ್ಳತನ ನಡೆಸುತ್ತಿದ್ದ ಎನ್ನಲಾಗಿದೆ. ನಿನ್ನೆ ಸಂಜೆ ಸೋಮೇಶ್ವರ ಬಸ್ಸು ತಂಗುದಾಣದ ಬಳಿಯ ಬಾಡಿಗೆ ಮನೆ ನಿವಾಸಿಯಾದ ಪ್ರಶಾಂತ್ ಅವರ ಮನೆ ಹಿಂಬಾಗಿಲ ಚಿಲಕ ಮುರಿದು ಒಳ ನುಗ್ಗಿದ ಮೊವಾಝ್ ಕಪಾಟಿನಲ್ಲಿದ್ದ ಕರಿಮಣಿ ಸರ ಮತ್ತು ಚೈನ್ ಸೇರಿ ಒಟ್ಟು 26 ಗ್ರಾಂ ಚಿನ್ನ ಅಲ್ಲದೆ 3000 ರೂಪಾಯಿ ನಗದನ್ನ ದೋಚಿದ್ದ. ಪ್ರಶಾಂತ್ ಅವರು ಪತ್ನಿ , ಮಗನೊಂದಿಗೆ ಉಡುಪಿಗೆ ತೆರಳಿದ್ದ ವೇಳೆ ಕಳ್ಳತನ ನಡೆದಿತ್ತು.
ಬುಧವಾರ ಸಂಜೆ 7.15 ರ ವೇಳೆ ಪ್ರಶಾಂತ್ ಅವರು ನೆಲೆಸಿರುವ ಬಾಡಿಗೆ ಮನೆ ಪಕ್ಕದಲ್ಲಿರುವ ನಮೋ ಹೆರಿಟೇಜ್ ಎಂಬ ಹೋಂ ಸ್ಟೇ ಕಟ್ಟಡಕ್ಕೆ ತಲೆಗೆ ಟೊಪ್ಪಿ ಮತ್ತು ಕಣ್ಣಿಗೆ ಕನ್ನಡಕ ಹಾಕಿ ನುಗ್ಗಿದ್ದ ಮೊವಾಝ್ ಬಾಗಿಲನ್ನ ಕಬ್ಬಿಣದ ಸಲಾಕೆಯಲ್ಲಿ ಮುರಿದು ಕನ್ನ ಹಾಕಿರೋದು ಅಲ್ಲಿನ ಸಿಸಿಟಿವಿಯಲ್ಲಿ ವೀಡಿಯೋ ದಾಖಲಾಗಿತ್ತು. ಹೋಂ ಸ್ಟೇ ಒಳಗಡೆ ತಡಕಾಡಿದ ಆತನಿಗೆ ಅಲ್ಲಿ ಏನೂ ಸಿಕ್ಕಿರಲಿಲ್ಲ.
ನಿನ್ನೆ ರಾತ್ರಿ ಉಳ್ಳಾಲ ಮೇಲಂಗಡಿಯ ಕಿರೋಡಿಯನ್ ಕುಟಂಬಸ್ಥರ ದೈವಸ್ಥಾನಕ್ಕೂ ಈತ ಕನ್ನ ಹಾಕಿದ್ದು ಹಿತ್ತಾಳೆಯ ದೈವದ ಪರಿಕರಗಳು ಮತ್ತು ಕಾಣಿಕೆ ಹುಂಡಿಯ ಚಿಲ್ಲರೆ ಹಣವನ್ನ ಎಗರಿಸಿದ್ದ. ಪಕ್ಕದಲ್ಲೇ ಇದ್ದ ದೈವದ ಚಾಕರಿಯವರಾದ ಪ್ರಸಾದ್ ಅವರ ಮನೆಯ ಹಿಂಬಾಗಿಲನ್ನ ಮುರಿದು ಕಬಾಟಿನಲ್ಲಿದ್ದ 56 ಗ್ರಾಂ ಚಿನ್ನವನ್ನ ದೋಚಿ ಪರಾರಿಯಾಗಿದ್ದ. ಈ ಬಗ್ಗೆಯೂ ದೈವಸ್ಥಾನದ ಹತ್ತಿರದ ಮನೆಯೊಂದರ ಸಿಸಿಟಿವಿಯಲ್ಲಿ ಕಳ್ಳ ಮೊವಾಝ್ ನ ಚಹರೆ ದಾಖಲಾಗಿತ್ತು.
ಕ್ಷಿಪ್ರವಾಗಿ ಕಳ್ಳನ ಜಾಡನ್ನ ಹಿಡಿದ ಉಳ್ಳಾಲ ಪಿಐ ಸಂದೀಪ್ ನೇತೃತ್ವದ ತಂಡವು ಕಳ್ಳನನ್ನ ಹೆಡೆಮುರಿ ಕಟ್ಟಲು ಯಶಸ್ವಿಯಾಗಿದೆ. ಆರೋಪಿ ಮೊವಾಝ್ ಈ ಹಿಂದೆ ಉಳ್ಳಾಲದಲ್ಲಿ ನಡೆದಂತಹ ಅನೇಕ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Mangalore Robbery in two houses, gold cash robbed, accused arrested in one days time by ullal police
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 09:56 pm
Mangalore Correspondent
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
29-07-25 08:54 pm
HK News Desk
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm