ಬ್ರೇಕಿಂಗ್ ನ್ಯೂಸ್
10-09-22 03:14 pm Bangalore Correspondent ಕ್ರೈಂ
ಬೆಂಗಳೂರು, ಸೆ.10: ಮದುವೆಯಾಗಿ ಮಗ ಇದ್ದರೂ ಕೂಡ 14 ವರ್ಷದ ಬಾಲಕಿಯನ್ನು ಮದುವೆಯಾಗಿದ್ದ 46 ವರ್ಷದ ವ್ಯಕ್ತಿಯನ್ನು ಯಲಹಂಕದ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.
46 ವರ್ಷದ ಗುರುಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಈತ ಕಳೆದ ತಿಂಗಳ 7ನೇ ತಾರೀಖು ಬಾಲಕಿಯನ್ನು ಒತ್ತಾಯ ಪೂರ್ವಕವಾಗಿ ಮದುವೆಯಾಗಿದ್ದನಂತೆ.
ಬಾಲಕಿಗೆ ಇಷ್ಟವಿಲ್ಲದಿದ್ದರೂ ಆಕೆಯ ಪೋಷಕರಿಗೆ ಹಣದ ಆಸೆ ತೋರಿಸಿ ಮದುವೆಯಾಗಿದ್ದನು ಎಂದು ಹೇಳಲಾಗುತ್ತಿದೆ.
ಇನ್ನು ಈ ಆರೋಪಿ ಗುರುಪ್ರಸಾದ್ ಗೆ ಈಗಾಗಲೇ ಮದುವೆಯಾಗಿ 17 ವರ್ಷದ ಮಗ ಕೂಎ ಇದ್ದಾನೆ. ಕೆಲ ವರ್ಷಗಳಿಂದ ಹೆಂಡತಿಯನ್ನು ಬಿಟ್ಟು ಬೇರೆಡೆ ವಾಸವಾಗಿದ್ದನು ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಾಲಕಿಯನ್ನು ಮದುವೆಯಾಗೋದಾಗಿ ಪೋಷಕರಿಗೆ ಹೇಳಿದ್ದನಂತೆ. ಆಗ ಬಾಲಕಿ ಒಪ್ಪದಿದ್ದಾಗ ಪೋಷಕರಿಗೆ ಹಣದ ಆಸೆ ತೋರಿಸಿದ್ದನಂತೆ. 7ನೇ ತಾರೀಖು ನಗರದ ಹೊರ ವಲಯಕ್ಕೆ ಕರೆದೊಯ್ದು ಆಕೆಯನ್ನು ಮದುವೆಯಾಗಿದ್ದನಂತೆ.
ಇನ್ನು ಈ ಬಗ್ಗೆ ಬಾಲಕಿಯು, ಪರಿಚಯಸ್ಥರ ಬಳಿ ತನ್ನ ನೋವು ಹೇಳಿಕೊಂಡಿದ್ದಾಳೆ. ಆಗ ಕೂಡಲೇ ಅವರು ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆ ಬಳಿಕ ಬಾಲಕಿಯ ತಂದೆ-ತಾಯಿಯನ್ನೂ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
Karnataka Police said on Saturday that it arrested the 46-year-old husband and parents of a 14-year-old girl on charges of child marriage in Yelahanka New Town of Bengaluru.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm